ಪಾಕ್ ಸೇನೆಯಿಂದ ಗುಂಡಿನ ದಾಳಿ: ಓರ್ವ ಭಾರತೀಯ ಸೈನಿಕ ಹುತಾತ್ಮ,ಇಬ್ಬರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪೊಂಛ್: ಜಮ್ಮು ಮತ್ತು ಕಾಶ್ಮೀರದ ಪೊಂಛ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಭಾನುವಾರ ಪಾಕಿಸ್ತಾನ ಸೇನೆ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೊಂಛ್ ಮತ್ತು ರಜೌರಿ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನ ನಡೆಸಿದ ಗುಂಡು ಹಾಗೂ ಶೆಲ್ ದಾಳಿಯಲ್ಲಿ  ಮೃತಪಟ್ಟ ಸೈನಿಕರಲ್ಲಿ ಇವರು ಮೂರನೇಯವರಾಗಿದ್ದಾರೆ. ಷಹಪುರ್ - ಕರ್ನಿ ಸೆಕ್ಟರ್ ನ ಗಡಿಯುದ್ದಕ್ಕೂ ಶನಿವಾರ ರಾತ್ರಿ ಪಾಕಿಸ್ತಾನ ಸೈನಿಕರು ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು, ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಪಾಕಿಸ್ತಾನ ಸೈನಿಕರು ನಡೆಸಿದ ದಾಳಿಯಲ್ಲಿ ಗಾಯಗೊಂಡಿದ್ದ ಮೂವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತಾದರೂ ಗಾಯಾಳುಗಳ ಪೈಕಿ ಒಬ್ಬರು ಮೃತಪಟ್ಟಿರುವುದಾಗಿ ಅವರು ತಿಳಿಸಿದ್ದಾರೆ. ಪ್ರತ್ಯುತ್ತರ ನೀಡುವ ಕಾರ್ಯದಲ್ಲಿ  ಪಾಕಿಸ್ತಾನ ಸೈನಿಕರಿಂದ ಆಗಿರುವ ಸಾವು ನೋವಿನ ಬಗ್ಗೆ ಯಾವುದೇ ಮಾಹಿತಿ ತಿಳಿದಿಲ್ಲ ಎಂದು ಹೇಳಿದ್ದಾರೆ. 

ರಜೌರಿ ಜಿಲ್ಲೆಯಲ್ಲಿ ಜೂನ್ 4 ರಂದು ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಹವಲ್ದಾರ್ ಪಿ. ಮಥಿಯಾಜಗನ್  ಎಂಬವರು ಹುತಾತ್ಮರಾಗಿದ್ದರು. ಜೂನ್ 10 ರಂದು ನಾಯಕ್ ಗುರುಚರಣ್ ಸಿಂಗ್ ಪ್ರಾಣತೆತ್ತಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com