ಚೀನೀ ಸೈನಿಕರಿಂದ ಭಾರತೀಯ ಯೋಧರ ಹತ್ಯೆ; ಆಘಾತ ವ್ಯಕ್ತಪಡಿಸಿದ ಕಾಂಗ್ರೆಸ್

ಲಡಾಖ್ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಕೊಂದಿರುವ ಘಟನೆ ಕುರಿತಂತೆ ಪ್ರತಿಪಕ್ಷ ಕಾಂಗ್ರೆಸ್ ಆಘಾತ ವ್ಯಕ್ತಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಲಡಾಖ್ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಕೊಂದಿರುವ ಘಟನೆ ಕುರಿತಂತೆ ಪ್ರತಿಪಕ್ಷ ಕಾಂಗ್ರೆಸ್ ಆಘಾತ ವ್ಯಕ್ತಪಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ಚೀನೀ ಸೈನಿಕರ ನಡೆ ಆಘಾತಕಾರಿ ಮತ್ತು ಸಹಿಸಲಾಗದ್ದು ಎಂದು ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು, ಲಡಾಖ್ ಗಡಿಯಲ್ಲಿನ ಘಟನೆ ನಿಜಕ್ಕೂ ಆಘಾತಕಾರಿ ಮತ್ತು ಸಹಿಸಲಸಾಧ್ಯವಾದದ್ದು. ಈ ಬಗ್ಗೆ ರಕ್ಷಣಾ ಮಂತ್ರಿಗಳೇ ಮಾಹಿತಿ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಪೂರ್ವ ಲಡಾಖ್ ನ ಗಲ್ವಾನ್ ವ್ಯಾಲಿಯಲ್ಲಿ ಭಾರತೀಯ ಯೋಧರು ಮತ್ತು ಚೀನೀ ಸೈನಿಕರ ನಡುವೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಂಘರ್ಷ ಏರ್ಪಟ್ಟಿದ್ದು, ಈ ವೇಳೆ ಉಭಯ ಬಣದ ಸೈನಿಕರ ನಡುವೆ ವಾಕ್ಸಮರ ಏರ್ಪಟ್ಟಿದೆ. ಈ ವೇಳೆ ನೋಡ ನೋಡುತ್ತಲೇ ಪರಿಸ್ಥಿತಿ ಕೈ ಮೀರಿದ್ದು ಹೊಡೆದಾಟ ಆರಂಭವಾಗಿ ಚೀನೀ ಸೈನಿಕರ ಭಾರತೀಯ ಸೇನೆಯ ಓರ್ವ ಅಧಿಕಾರಿ ಮತ್ತು ಇಬ್ಬರು ಸೈನಿಕರನ್ನು ಕೊಂದು ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com