ನವದೆಹಲಿ: ಲಡಖ್ ನಲ್ಲಿ ಚೀನಾ ಸೇನೆಯ ಕ್ಯಾತೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ ಮುಖ್ಯಸ್ಥ, 3 ಸೇನಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಸಂಪೂರ್ಣ ಸನ್ನದ್ಧರಾಗಿರಿ ಎಂಬ ಸೂಚನೆ ನೀಡಿದ್ದಾರೆ.
ರಾಜನಾಥ್ ಸಿಂಗ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ನಡೆದ ಘರ್ಷಣೆ ಬಗ್ಗೆ ಚರ್ಚಿಸಲಾಯಿತು. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ರಾಜನಾಥ್ ಸಿಂಗ್ ವಾಸ್ತವ ಗಡಿ ರೇಖೆಯ ಬಳಿ ಇರುವ ಸಂದರ್ಭಕ್ಕೆ ಅನುಗುಣವಾಗಿ ಹಿಂದೆಂದೂ ತೆಗೆದುಕೊಂಡಿರದ ಕ್ರಮ ಕೈಗೊಳ್ಳುವುದಕ್ಕೆ ಸಂಪೂರ್ಣವಾಗಿ ಸನ್ನದ್ಧರಾಗಿರಲು ರಕ್ಷಣಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.
ಗಸ್ತು ತಿರುಗುವ ವೇಳೆ ಅತ್ಯಂತ ಎಚ್ಚರಿಕೆಯಿಂದ ಇರಲು ಹಾಗೂ ಚೀನಾದ ಗಡಿ ಪ್ರದೇಶದಲ್ಲಿ ಹೆಚ್ಚು ಜಾಗರೂಕರಾಗಿರುವಂತೆ ರಕ್ಷಣಾ ಸಚಿವರು ಸೂಚನೆ ನೀಡಿದ್ದಾರೆ. ಇದೇ ವೇಳೆ ರಕ್ಷಣಾ ಸಚಿವರು ರಷ್ಯಾಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ರಕ್ಷಣಾ ಒಪ್ಪಂದಗಳ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆದಿದೆ.
Advertisement