ಶ್ರೀನಗರದ ಝಾದಿಬಾಲ್'ನಲ್ಲಿ ಎನ್ಕೌಂಟರ್: 3 ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಶ್ರೀನಗರದ ಝಾದಿಬಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಶ್ರೀನಗರದ ಝಾದಿಬಾಲ್ ಎಂಬ ಪ್ರದೇಶದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಝಾದಿಬಾಲ್'ನಲ್ಲಿರುವ ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ತಿಳಿಯುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು. ಇದರಂತೆ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ವರದಿಗಳು ತಿಳಿಸಿವೆ. 

ಕಾರ್ಯಾಚರಣೆ ಕುರಿತು ಶ್ರೀನಗರ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದು, ಮೂವರು ಉಗ್ರರ ಪೈಕಿ ಇಬ್ಬರು ಉಗ್ರರು ಸ್ಥಳೀಯರಾಗಿದ್ದಾರೆಂದು ತಿಳಿಬಂದಿತ್ತು. ಕೂಡಲೇ ಅವರ ಪೋಷಕರೊಂದಿಗೆ ಮಾತುಕತೆ ನಡೆಸಿ, ಶರಣಾಗುವಂತೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದೆವು. ಆದರೆ, ಪೋಷಕರ ಮನವಿ ಬಳಿಕವೂ ಶರಣಾಗಲು ಅವರು ಒಪ್ಪುತ್ತಿಲ್ಲ. ಶರಣಾಗಲು ಎರಡೂವರೆ ಗಂಟೆಗಳ ಕಾಲ ಕಾಲಾವಕಾಶ ನೀಡಲಾಗಿತ್ತು. ಆದರೂ ಅವರು ಶರಣಾಗುತ್ತಿಲ್ಲ ಎಂದು ಹೇಳಿದ್ದಾರೆ. 

ಇದೀಗ ಸ್ಥಳದ ಸುತ್ತಲೂ ಭದ್ರತಾ ಪಡೆಗಳು ಸುತ್ತವರೆದಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಮೂವರಲ್ಲಿ ಇಬ್ಬರು ಉಗ್ರರು 2019ರಿಂದಲೂ ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಕಳೆದ ತಿಂಗಳು ಇಬ್ಬರು ಬಿಎಸ್ಎಫ್ ಯೋಧರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com