ದೆಹಲಿ ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ಐಬಿ ಆಫೀಸರ್ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ- ಕೇಜ್ರಿವಾಲ್

ಈಶಾನ್ಯ ದೆಹಲಿ ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಕುಟುಂಬಕ್ಕೆ ಗೌರವಾರ್ಥವಾಗಿ 1 ಕೋಟಿ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪ್ರಕಟಿಸಿದ್ದಾರೆ
ಕೇಜ್ರಿವಾಲ್, ಅಂಕಿತ್ ಶರ್ಮಾ
ಕೇಜ್ರಿವಾಲ್, ಅಂಕಿತ್ ಶರ್ಮಾ

ನವದೆಹಲಿ:ಈಶಾನ್ಯ ದೆಹಲಿ ಗಲಭೆಯಲ್ಲಿ ಪ್ರಾಣ ಕಳೆದುಕೊಂಡ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರ ಕುಟುಂಬಕ್ಕೆ ಗೌರವಾರ್ಥವಾಗಿ 1 ಕೋಟಿ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಪ್ರಕಟಿಸಿದ್ದಾರೆ. ಅಂಕಿತ್ ಶರ್ಮಾ ಅವರ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸವನ್ನು ನೀಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ದಕ್ಷ ಅಧಿಕಾರಿಯಾಗಿದ್ದ ಅಂಕಿತ್ ಶರ್ಮಾ ಅವರನ್ನು ಹಿಂಸಾಚಾರದಲ್ಲಿ ಬರ್ಬರ ರೀತಿಯಲ್ಲಿ ಹತ್ಯೆ ಮಾಡಲಾಗಿದೆ. ಅವರ ಬಗ್ಗೆ ದೇಶಕ್ಕೆ ಹೆಮ್ಮೆಯಿದೆ. ಅವರ ಕುಟುಂಬಕ್ಕೆ 1 ಕೋಟಿ ನೆರವು ಹಾಗೂ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಕೆಲಸ ನೀಡಲಾಗುವುದು, ಅವರ ಆತ್ಮಕ್ಕೆ ಶಾಂತಿ ಕೋರುವುದಾಗಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಕಳೆದ ವಾರ ಚಾಂದ್ ಬಾಗ್ ಪ್ರದೇಶದಲ್ಲಿ ಚರಂಡಿಯೊಂದರಲ್ಲಿ ಶರ್ಮಾ ಅವರ ಮೃತದೇಹ ಪತ್ತೆಯಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com