ಗಲ್ಲು ತಪ್ಪಿಸಿಕೊಳ್ಳುವ ಮತ್ತೊಂದು ಯತ್ನ ವಿಫಲ: ನಿರ್ಭಯಾ ಹತ್ಯಾಚಾರಿಯ ಮತ್ತೊಂದು ಅರ್ಜಿ 'ಸುಪ್ರೀಂ'ನಿಂದ ವಜಾ!

ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳುವ ನಿರ್ಭಯಾ ಅತ್ಯಾಚಾರಿಗಳ ಮತ್ತೊಂದು ಪ್ರಯತ್ನವನ್ನು ಸುಪ್ರೀಂ ಕೋರ್ಟ್ ವಿಫಲಗೊಳಿಸಿದ್ದು, ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳುವ ನಿರ್ಭಯಾ ಅತ್ಯಾಚಾರಿಗಳ ಮತ್ತೊಂದು ಪ್ರಯತ್ನವನ್ನು ಸುಪ್ರೀಂ ಕೋರ್ಟ್ ವಿಫಲಗೊಳಿಸಿದ್ದು, ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಹಿಂದೆ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯಲ್ಲಿ ಲೋಪದೋಷಗಳಿದ್ದು, ನ್ಯಾಯಾಲಯ ಕೆಲ ಪ್ರಮುಖ ಅಂಶಗಳನ್ನು ಪರಿಗಣಿಸದೇ ತೀರ್ಪು ನೀಡಿದೆ. ಹೀಗಾಗಿ ತಮಗೆ ನೀಡಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸುವಂತೆ ಆಪರಾದಿ ಪವನ್ ಗುಪ್ತಾ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದ. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಇದೀಗ ಹತ್ಯಾಚಾರಿಗಳ ಗಲ್ಲು ಶಿಕ್ಷೆ ಖಾಯಂ ಆಗಿದೆ.

ಈ ಹಿಂದೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನಂತೆ ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ಮುಂಜಾನೆ ನಿರ್ಭಯಾ ಪ್ರಕರಣದ ಎಲ್ಲ ಅಪರಾಧಿಗಳನ್ನು ಗಲ್ಲಿಗೇರಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com