ನವದೆಹಲಿ: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ಲೋಕಸಭೆಯಲ್ಲಿ ಈ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 5 ವಿದೇಶಿಗಳು ಭಾಗಿಯಾಗಿದ್ದರು. ಈ ಮೂಲಕ ಅವರು ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅವರನ್ನು ದೇಶ ಬಿಡುವಂತೆ ಸೂಚನೆ ನೀಡಲಾಗುವುದು ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ್ದಾರೆ.
Advertisement