ಅತ್ಯಾಚಾರ ಪ್ರಕರಣ; ಆರೋಪಿ ಸ್ವಾಮಿ ಚಿನ್ಮಯಾನಂದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.  
ಸ್ವಾಮಿ ಚಿನ್ಮಾಯನಂದ
ಸ್ವಾಮಿ ಚಿನ್ಮಾಯನಂದ

ನವದೆಹಲಿ: ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಸ್ವಾಮಿ ಚಿನ್ಮಯಾನಂದ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.  ಅಲ್ಲದೆ ಸಂತ್ರಸ್ತೆ ವಿದ್ಯಾರ್ಥಿನಿಗೆ ಸಾಕಷ್ಟು ರಕ್ಷಣೆ ನೀಡಲಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ದೃಢಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಲಕ್ನೋದಿಂದ ದೆಹಲಿಗೆ ವರ್ಗಾಯಿಸಬೇಕು ಎಂಬ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com