ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಕಾರು-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ, 12 ಮಂದಿ ದುರ್ಮರಣ

ಬಿಹಾರ ರಾಜ್ಯದಲ್ಲಿ ಜವರಾಯ ಬೆಳ್ಳಂಬೆಳಿಗ್ಗೆ ಅಟ್ಟಹಾಸ ಮೆರೆದಿದ್ದು, ಕಾರು-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಮುಜಾಫರ್ ಪರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-28ರಲ್ಲಿ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಿಹಾರ: ಬಿಹಾರ ರಾಜ್ಯದಲ್ಲಿ ಜವರಾಯ ಬೆಳ್ಳಂಬೆಳಿಗ್ಗೆ ಅಟ್ಟಹಾಸ ಮೆರೆದಿದ್ದು, ಕಾರು-ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಮುಜಾಫರ್ ಪರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-28ರಲ್ಲಿ ನಡೆದಿದೆ. 

ಭೀಕರ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. 

ಅಪಘಾತಕ್ಕೀಡಾದವರೆಲ್ಲರೂ ಮುಜಾಫರ್ ಪುರ್'ದ ಹತ್ತೋರಿ ಜಿಲ್ಲೆಯವರು ಎಂದು ಹೇಳಲಾಗುತ್ತಿದ್ದು, ಮೃತರ ಗುರ್ತಿಕೆ ಇನ್ನಷ್ಟೇ ಪತ್ತೆಯಾಗಬೇಕಿದೆ. 

ಪ್ರಸ್ತುತ ಘಟನೆಯಲ್ಲಿ ಗಾಯಗೊಂಡಿರುವ 4 ನಾಲ್ವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com