ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ಆಡಳಿತಾರೂಢ ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ಒಡಿಶಾ ವಿಧಾಮಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್
ಬಿಜೆಡಿ ಮುಖ್ಯಸ್ಥ ನವೀನ್ ಪಟ್ನಾಯಕ್

ಭುವನೇಶ್ವರ: ರಾಜ್ಯಸಭಾ ಚುನಾವಣಾ ಕಣದಲ್ಲಿದ್ದ ಆಡಳಿತಾರೂಢ ಬಿಜೆಡಿಯ ಎಲ್ಲ ನಾಲ್ವರು ಅಭ್ಯರ್ಥಿಗಳು ಒಡಿಶಾ ವಿಧಾಮಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಡಿ ಅಭ್ಯರ್ಥಿಗಳ ವಿರುದ್ಧ ಪ್ರತಿಪಕ್ಷಗಳ ಯಾವುದೇ ಅಭ್ಯರ್ಥಿ ಚುನಾವಣೆಗೆ ಸ್ಪರ್ಧಿಸದ ಹಿನ್ನೆಲೆಯಲ್ಲಿ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಡಿಯ ಸುಭಾಶ್ ಸಿಂಗ್, ಮುನ್ನಾ ಖನ್ನಾ, ಸುಜಿತ್ ಕುಮಾರ್ ಮತ್ತು ಮಮತಾ ಮಹಂತ ಅವರಿಗೆ ರಾಜ್ಯಸಭೆಗೆ ಒಡಿಶಾ ಚುನಾವಣಾಧಿಕಾರಿಯಾಗಿರುವ ದಶರಥಿ ಸತ್ಪತಿ ಅವರು ಆಯ್ಕೆ ಪ್ರಮಾಣ ಪತ್ರ ನೀಡಿದರು.

ವಿಧಾನಸಭೆಯಲ್ಲಿ 23 ಸ್ಥಾನಗಳನ್ನು ಹೊಂದಿರುವ ಬಿಜೆಪಿ, 9 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರಲಿಲ್ಲ. ರಾಜ್ಯ ವಿಧಾನಸಭೆಯ 147 ಸ್ಥಾನಗಳ ಪೈಕಿ ಆಡಳಿತಾರೂಢ ಬಿಜು ಜನತಾ ದಳ(ಬಿಜೆಡಿ) 113 ಸ್ಥಾನಗಳನ್ನು ಹೊಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com