ಕೊರೋನಾ ವಿರುದ್ಧ ಹೋರಾಡಲು ಗೋಮೂತ್ರ ಸೇವನೆ ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತನ ಬಂಧನ

ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಮತ್ತು ಸೋಂಕಿನಿಂದ ಗುಣಮುಖರಾಗುವುದಕ್ಕಾಗಿ ಗೋಮೂತ್ರ ಸೇವನೆ ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲ್ಕತಾ: ಕೊರೋನಾ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಮತ್ತು ಸೋಂಕಿನಿಂದ ಗುಣಮುಖರಾಗುವುದಕ್ಕಾಗಿ ಗೋಮೂತ್ರ ಸೇವನೆ ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಬಿಜೆಪಿ ಕಾರ್ಯಕರ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೋಮೂತ್ರ ಕುಡಿದು ಅನಾರೋಗ್ಯಕ್ಕಿಡಾಗಿದ್ದ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಕಾರ್ಯಕರ್ತ 40 ವರ್ಷದ ನಾರಾಯಣ ಚಟರ್ಜಿ ಅವರನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಚಟರ್ಜಿ ಅವರು ಸೋಮವಾರ ಗೋ ಪೂಜೆ ಮತ್ತು ಗೋಮೂತ್ರ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು.

ಇನ್ನು ಚಟರ್ಜಿ ಬಂಧನವನ್ನು ಖಂಡಿಸಿರುವ ಬಿಜೆಪಿ ರಾಜ್ಯ ನಾಯಕರು, ಚಟರ್ಜಿ ಅವರು ಗೋಮೂತ್ರ ವಿತರಣೆ ಮಾಡಿದ್ದಾರೆ. ಆದರೆ ಕುಡಿಯುವಂತೆ ಯಾರಿಗೂ ಬಲವಂತ ಮಾಡಿಲ್ಲ ಮತ್ತು ಅದನ್ನು ಸೇವಿಸುವಂತೆ ಜನರನ್ನು ಮರಳು ಮಾಡಿಲ್ಲ ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com