ರಾಯಪುರ: ಸುಕ್ಮಾ ಜಿಲ್ಲೆಯಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆ ವೇಳೆ ಕಣ್ಮರೆಯಾಗಿದ್ದ 17 ವಿಶೇಷ ಕಾರ್ಯಪಡೆ(ಎಸ್ಟಿಎಫ್)ಯ ಸೈನಿಕರ ಮೃತದೇಹ ಪತ್ತೆಯಾಗಿದ್ದು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ನಕ್ಸಲರು ಹೊತ್ತೊಯ್ದಿದ್ದಾರೆ.
ಚಿಂಟಗುಫಾದ ಕೊರಾಜ್ ಗುಡ ಬೆಟ್ಟದಲ್ಲಿ ನಿನ್ನೆ ಮಧ್ಯಾಹ್ನ 2.30ರ ಸುಮಾರಿಗೆ ನಕ್ಸಲ್ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಆದರೆ ರಾತ್ರಿ 17 ಮಂದಿ ಸೈನಿಕರು ಕಾಡಿನಲ್ಲಿ ಕಣ್ಮರೆಯಾಗಿದ್ದರು.
ಇದೀಗ ಕಾರ್ಯಾಚರಣೆಯಲ್ಲಿ 15 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement