ಕೊರೋನಾ ವಿರುದ್ಧ ಹೋರಾಡುವವರಿಗೆ ಭಗವಂತ ಸುರಕ್ಷತೆ ಕೊಡಲಿ: ಕನ್ನಡದಲ್ಲಿ ಪ್ರಧಾನಿ ಯುಗಾದಿ ಶುಭ ಹಾರೈಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ವರ್ಷ ಯುಗಾದಿ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ವರ್ಷ ಯುಗಾದಿ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಕನ್ನಡ ಭಾಷೆಯಲ್ಲಿ ಕರ್ನಾಟಕ ಜನತೆಗೆ ಶುಭಾಶಯ ತಿಳಿಸಿರುವ ಅವರು, ಯುಗಾದಿ ಹೊಸ ವರ್ಷ ಬಂದಿದೆ! ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶಿರ್ವಾದವಿರಲಿ ಎಂದಿದ್ದಾರೆ.

ದೇಶ ಕೊವಿಡ್-19 ಎಂಬ ಮಾರಕ ರೋಗವನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ನಾವು ಯುಗಾದಿ ಆಚರಿಸುತ್ತಿದ್ದೇವೆ. ಎಲ್ಲಾ ಹಬ್ಬಗಳ ಸಮಯದಂತೆ ಈ ವರ್ಷ ಪರಿಸ್ಥಿತಿ ಅನುಕೂಲವಾಗಿಲ್ಲ, ಆದರೂ ಪರಿಸ್ಥಿತಿಯನ್ನು ಎದುರಿಸಿ ಗೆಲ್ಲುವ ಶಕ್ತಿಯನ್ನು ನಮಗೆ ನೀಡಲಿದೆ. ಕೊರೋನಾ ವೈರಸ್ ವಿರುದ್ಧ ಧೈರ್ಯವಾಗಿ ಹೋರಾಡೋಣ ಎಂದಿದ್ದಾರೆ.

ಕೊರೋನಾ ಸೋಂಕಿನ ನಿವಾರಣೆಯಲ್ಲಿ ನಿರತರಾಗಿರುವವರಿಗೆ ಸುರಕ್ಷತೆ, ಆರೋಗ್ಯವನ್ನು ಭಗವಂತ ನೀಡಲಿ ಎಂದು ಪ್ರಧಾನಿ ಕೇಳಿಕೊಂಡಿದ್ದಾರೆ.<

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com