ಅಲಿಗಡ: ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಕೇಸ್ ದಾಖಲಿಸಿದ್ದಾರೆ ಕಲ್ಯಾಣ್ ಸಿಂಗ್ ಅವರಿಗೆ ವಾಟ್ಸಾಪ್ ಮೂಲಕ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಿಜೆಪಿ ಶಾಸಕ ರವೇಂದ್ರ ಪಲ್ ಸಿಂಗ್ ಎಸ್ ಎಸ್ ಪಿ ಮುನಿರಾಜ್ ಜಿ ಅವರಿಗೆ ದೂರು ನೀಡಿದ್ದು, ವಾಟ್ಸ್ಆ್ಯಪ್ನಲ್ಲಿ ಹಂಚಿಕೊಳ್ಳುತ್ತಿರುವ ವಿಡಿಯೋ ತುಣುಕಿನ ಬಗ್ಗೆ ತನಿಖೆ ನಡೆಸಬೇಕು ಮತ್ತು ಕೇಸ್ ದಾಖಲಿಸಬೇಕೆಂದು ಎಂದು ಒತ್ತಾಯಿಸಿದ್ದರು.
ಅಖಿಲ ಭಾರತ ಲೋಧಿ ಮಹಾಸಭಾ ಎಸ್ ಎಸ್ ಪಿ ಅವರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಕಲ್ಯಾಣ್ ಸಿಂಗ್ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ವಾಟ್ಸಾಪ್ ನಲ್ಲಿ ಕಳುಹಿಸಿದ್ದರು.
Advertisement