ಮಹಾರಾಷ್ಟ್ರ: ಮದ್ಯ ಖರೀದಿಗೆ ಹಣ ಕೊಡದ ಮಾಲೀಕನನ್ನು ದೊಣ್ಣೆಯಿಂದ ಹೊಡೆದು ಕೊಂದ ಟೀ ಸ್ಟಾಲ್ ಕಾರ್ಮಿಕ

ಮದ್ಯ ಖರೀದಿಗೆ ಹಣ ನೀಡದಿದ್ದಕ್ಕೆ ಟೀ ಸ್ಟಾಲ್ ಮಾಲೀಕನನ್ನು ಕೆಲಸಗಾರನೊಬ್ಬ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಲ್ಘರ್: ಮದ್ಯ ಖರೀದಿಗೆ ಹಣ ನೀಡದಿದ್ದಕ್ಕೆ ಟೀ ಸ್ಟಾಲ್ ಮಾಲೀಕನನ್ನು ಕೆಲಸಗಾರನೊಬ್ಬ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿ 42 ವರ್ಷದ ರಾಮ್ ವಿಲಾಸ್ ರಾಜ್ಬರ್ ನನ್ನು ಘಟನೆ ನಡೆದ ಕೆಲ ತಾಸುಗಳಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಮಹಾರಾಷ್ಟ್ರದಲ್ಲಿ ಲಿಕ್ಕರ್ ಶಾಪ್ ಗಳನ್ನು ಮುಚ್ಚಲಾಗಿತ್ತು. ಆದರೆ, ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಸ್ವತಂತ್ಯ ಮದ್ಯದಂಗಡಿಗಳು ಕಾರ್ಯನಿರ್ವಹಿಸಲು ಸೋಮವಾರದಿಂದ ಅನುಮತಿ ನೀಡಲಾಗಿತ್ತು. 

ಜಗಂದೇವ್ ರಾಜ್ಬರ್ (55) ಕೊಲೆಯಾದ  ಟೀ ಸ್ಟಾಲ್ ಮಾಲೀಕನಾಗಿದ್ದಾನೆ. ಬುಧವಾರ ರಾತ್ರಿ ಆರೋಪಿ ರಾಮ್ ವಿಲಾಸ್ ರಾಜ್ಬರ್, ಮದ್ಯ ಖರೀದಿಗಾಗಿ  ಜಗಂದೇವ್ ರಾಜ್ಬರ್ ಬಳಿ ಹಣ ಕೊಡುವಂತೆ ಕೇಳಿದ್ದಾನೆ. ಆದರೆ, ಹಣ ಕೊಡಲು ಮಾಲೀಕ ನಿರಾಕರಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಆರೋಪಿ, ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಕೊಲೆ ನಡೆದ ಕೆಲ ತಾಸುಗಳಲ್ಲಿಯೇ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 302 (ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com