ಗುಜರಾತ್ ಬಿಜೆಪಿ ಸಚಿವರ ಚುನಾವಣೆಯನ್ನೇ ಅನೂರ್ಜಿತಗೊಳಿಸಿದ ಹೈಕೋರ್ಟ್

ವಿಧಾನಸಭೆ ಚುನಾವಣೆಯಲ್ಲಿ ದುಷ್ಕೃತ್ಯ ಎಸಗಿದ ಮತ್ತು ತಿರುಚಿದ ಕಾರಣದಿಂದ ಗುಜರಾತ್ ಸರ್ಕಾರದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಸಚಿವ ಭೂಪೇಂದ್ರಸಿಂಹ ಚುಡಾಸಮಾ ಅವರ ಚುನಾವಣೆಯನ್ನು ಅನೂರ್ಜಿತವೆಂದು ಘೋಷಿಸಿದೆ.
ಭೂಪೇಂದ್ರಸಿಂಹ ಚುಡಾಸಮಾ
ಭೂಪೇಂದ್ರಸಿಂಹ ಚುಡಾಸಮಾ

ಅಹಮದಾಬಾದ್: ವಿಧಾನಸಭೆ ಚುನಾವಣೆಯಲ್ಲಿ ದುಷ್ಕೃತ್ಯ ಎಸಗಿದ ಮತ್ತು ತಿರುಚಿದ ಕಾರಣದಿಂದ ಗುಜರಾತ್ ಸರ್ಕಾರದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಸಚಿವ ಭೂಪೇಂದ್ರಸಿಂಹ ಚುಡಾಸಮಾ ಅವರ ಚುನಾವಣೆಯನ್ನು ಅನೂರ್ಜಿತವೆಂದು ಘೋಷಿಸಿದೆ.

2017 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಧೋಲ್ಕಾ ಕ್ಷೇತ್ರದಿಂದ 327 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕನ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಅಶ್ವಿನ್ ರಾಥೋಡ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪರೇಶ್ ಉಪಾಧ್ಯಾಯ ಅವರು, ಚುಡಾಸಮಾ ಅವರ ಆಯ್ಕೆಯನ್ನು ರದ್ದುಪಡಿಸಿದ್ದಾರೆ.

ಚುಡಾಸಮಾ ಅವರು ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ, ವಿಶೇಷವಾಗಿ ಮತಗಳನ್ನು ಎಣಿಸುವ ಸಮಯದಲ್ಲಿ, ಚುನಾವಣಾ ಆಯೋಗದ ಹಲವು ಕಡ್ಡಾಯ ಸೂಚನೆಗಳನ್ನು ಉಲ್ಲಂಘಿಸಿದ್ದರು ಮತ್ತು ಅಕ್ರಮ ಎಸಗಿದ್ದಾರೆ ಎಂದು ರಾಥೋಡ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು.

ಚುಡಾಸಮಾ ಪ್ರಸ್ತುತ ವಿಜಯ್ ರೂಪಾನಿ ಸರ್ಕಾರದಲ್ಲಿ ಶಿಕ್ಷಣ, ಕಾನೂನು ಮತ್ತು ನ್ಯಾಯ, ಶಾಸಕಾಂಗ ಮತ್ತು ಸಂಸದೀಯ ವ್ಯವಹಾರಗಳು ಮತ್ತು ಇತರ ಕೆಲವು ಇಲಾಖೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com