ಕಾಸರಗೋಡು ಕನ್ನಡಿಗರ ಹೋರಾಟಕ್ಕೆ ಜಯ: ಮಂಜೇಶ್ವರಕ್ಕೆ 'ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ' ನೀಡಿದ ಕೇರಳ ಸರ್ಕಾರ

ಕೇರಳ ಗಡಿ ಜಿಲ್ಲೆ ಕಾಸರಗೋಡಿನ ಕನ್ನಡಿಗರ ಪಾಲಿಗಿದು ದೊಡ್ದ ಜಯವೇ ಸರಿ! ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕು ವ್ಯಾಪ್ತಿಯ ಪ್ರದೇಶವನ್ನು " ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ" ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ಕಾಸರಗೋಡು ಕನ್ನಡಿಗರ ಹೋರಾಟಕ್ಕೆ ಜಯ: ಮಂಜೇಶ್ವರಕ್ಕೆ 'ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ' ನೀಡಿದ ಕೇರಳ ಸರ್ಕಾರ

ಕಾಸರಗೋಡು: ಕೇರಳ ಗಡಿ ಜಿಲ್ಲೆ ಕಾಸರಗೋಡಿನ ಕನ್ನಡಿಗರ ಪಾಲಿಗಿದು ದೊಡ್ದ ಜಯವೇ ಸರಿ! ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕು ವ್ಯಾಪ್ತಿಯ ಪ್ರದೇಶವನ್ನು " ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ " ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಮಂಜೇಶ್ವರ ತಾಲ್ಲೂಕಿಗೆ ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ ಸ್ಥಾನಮಾನವನ್ನು ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶವಾದ ಕಾಸರಗೋಡವನ್ನು ವಿಭಜಿಸುವ ಮೂಲಕ ಮಂಜೇಶ್ವರನನ್ನು ಪ್ರತ್ಯೇಕ ತಾಲೂಕಾಗಿ ಮಾಡಲಾಗಿತ್ತಾದರೂ ಆ ವೇಳೆ  ಭಾಷಾ ಅಲ್ಪಸಂಖ್ಯಾತ ಸ್ಥಾನಮಾನವನ್ನು ಮಂಜೇಶ್ವರಕ್ಕೆ ನೀಡಲಾಗಿರಲಿಲ್ಲ. ಇದರಿಂದಾಗಿ ಅಲ್ಲಿನ ಕನ್ನಡಿಗರು ಕೆಲ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಪ್ರದೇಶ  ಕರ್ನಾಟಕ ಸಮಿತಿಯ ಅಧ್ಯಕ್ಷ ಮತ್ತು ವಕೀಲ ಕೆ ಎಂ ಬಳ್ಳಕುರಾಯ2014 ರಲ್ಲಿಯೇ ಮಂಜೇಶ್ವರ ತಾಲ್ಲೂಕಿಗೆ ಈ ಸ್ಥಾನಮಾನ ನೀಡುವ ಕುರಿತು ಹೋರಾಟಕ್ಕೆ ಮುಂದಾಗಿದ್ದರು.  ಈ ಬೇಡಿಕೆಯನ್ನು ಜಿಲ್ಲಾಧಿಕಾರಿ ಮತ್ತು ರಾಜ್ಯ ಅಲ್ಪಸಂಖ್ಯಾತರ ಸಮಿತಿಯೊಂದಿಗೆ ಸಕ್ರಿಯವಾಗಿ ಚರ್ಚಿಸಲಾಗಿ ಇದರ ಸಂಬಂಧ ಪ್ರತಿಭಟನೆ, ಮುಷ್ಕರಗಳು ಸಹ ನಡೆದಿದ್ದವು. 

ಇಷ್ಟೇ ಅಲ್ಲದೆ . ಒಂದು ನಿಯೋಗವು ತಿರುವನಂತಪುರಂಗೆ ಭೇಟಿ ನೀಡಿ ಮಂಜೇಶ್ವರವನ್ನು ಭಾಷಾ ಅಲ್ಪಸಂಖ್ಯಾತ ಪ್ರದೇಶವೆಂದು ಘೋಷಿಸುವ ಅಗತ್ಯತೆಯ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿತು. ಇದಾಗಿ ಕಳೆದ ಆರು ತಿಂಗಳಿನಿಂದ  ಮುಖ್ಯಮಂತ್ರಿ ಕಚೇರಿಯಲ್ಲಿ ಬಾಕಿ ಉಳಿದಿದ್ದ ಈ ವಿಷಯಕ್ಕೆ ಸಂಬಂಧಿಸಿದ ದಾಖಲೆಗಳಿದ್ದ ಕಡತವು ಇದೀಗ ಮುಖ್ಯಮಂತ್ರಿಯವರ ಸಹಿಯೊಂದಿಗೆ ಮರಳಿದೆ. ಮಂಜೇಶ್ವರ ಕನ್ನಡಿಗರು ಇನ್ನು ಮುಂದೆ ಕೇರಳದ ಕನ್ನಡ ಭಾಷಾ ಅಲ್ಪಸಂಖ್ಯಾತ ಸೌಲಭ್ಯಗಳನ್ನು ಮತ್ತು ಕರ್ನಾಟಕದ ಗದಿನಾಡ ಕನ್ನಡಿಗ ಸೌಲಭ್ಯಗಳನ್ನು ಪಡೆಯಲಿದ್ದಾರೆ. 

ಯಾವುದೇ ಬಹುಸಂಖ್ಯಾತ ಮಲಯಾಳಿ ಜನರು ಈ ಸೌಲಭ್ಯವನ್ನು ಪಡೆಯಲು ಸಾಧ್ಯವಾಗದ ರೀಇ ಕನ್ನಡಿಗರು ಜಾಗರೂಕರಾಗಿರಬೇಕಿದೆ. ಐದೇ ಉದ್ದೇಶದಿಂದ ಪ್ರಯತ್ನ ನಡೆಸಬೇಕು.ಈಗಾಗಲೇ ಸ್ಥಳೀಯರು ಕಾಸರ್‌ಗೋಡು ಡ್ ಜಿಲ್ಲೆಯ ಭಾಷಾ ಅಲ್ಪಸಂಖ್ಯಾತರು ತಮಗೆ ಸಾಕಷ್ಟು ಅನುಕೂಲ ಸಿಕ್ಕದಿರುವ ಬಗ್ಗೆ ಆರೋಪಿಸಿದ್ದಾರೆ.ಇಲ್ಲಿನ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಕನ್ನಡ-ತಿಳಿದಿರುವ ಅಧಿಕಾರಿ ಇರಬೇಕು ಎಂಬ ನಿಯಮವಿದ್ದರೂ, ಮಲಯಾಳಿ ಅಧಿಕಾರಿಗಳು ಇದನ್ನು ವಿರೋಧಿಸುತ್ತಿದ್ದಾರೆ. ಭಾಷಾ ಅಲ್ಪಸಂಖ್ಯಾತ ಪ್ರದೇಶದ ಪ್ರೌ ಢ ಶಾಲಾ ಮುಖ್ಯೋಪಾಧ್ಯಾಯರು, ಸಹಾಯಕ ಶಿಕ್ಷಣ ಅಧಿಕಾರಿ ಮತ್ತು ಜಿಲ್ಲಾ ಶಿಕ್ಷಣ ಅಧಿಕಾರಿ ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಲಾಗಿದೆ ಆದರೆ ಬಹುಸಂಖ್ಯಾತರಿರುವ  ಹಾಗೂ ಅವರು ಪ್ರತಿನಿಧಿಸುವ  ಸಂಘಗಳು ಈ ಸೌಲಭ್ಯಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿವೆ. ಕನ್ನಡಿಗರು ತಮ್ಮ ಮಕ್ಕಳು ಕನ್ನಡ ಮಧ್ಯಮ ಶಾಲೆಗಳಲ್ಲಿ ಅಧ್ಯಯನ ಮಾಡುವುದನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ತಮ್ಮ ಹಿತಾಸಕ್ತಿಗಳನ್ನು ಪೂರೈಸಿಕೊಳ್ಲಲು ಇದು ಅನುಕೂಲವಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com