ಲಕ್ನೋ: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ, ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.
ರಾಜಸ್ತಾನದಿಂದ ಉತ್ತರ ಪ್ರದೇಶದಲ್ಲಿರುವ ತಮ್ಮ ನಿವಾಸಗಳಿಗೆ ವಲಸೆ ಕಾರ್ಮಿಕರು ಟ್ರಕ್ ನಲ್ಲಿ ತೆರಳುತ್ತಿದ್ದರು,
ಮುಂಜಾನೆ ಸುಮಾರು 3.30 ರ ವೇಳೆಗೆ ಅಪಘಾತ ಸಂಭವಿಸಿದ್ದು, 23 ಮಂದಿ ಸಾವನ್ನಪ್ಪಿ, ಸುಮಾರು 15ರಿಂದ 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರೆಲ್ಲಾ ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ಮೂಲದವರೆಂದು ತಿಳಿದು ಬಂದಿದೆ.
ವಲಸಿಗ ಕಾರ್ಮಿಕರಿಗೆ ವಿಶೇಷ ರೈಲು, ಆಹಾರ, ಆಶ್ರಯ ಕಲ್ಪಿಸಿ: ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯದ ಸೂಚನೆ
ಮಹಾರಾಷ್ಟ್ರಕ್ಕೆ ಕೊರೋನಾಘಾತ: 1061 ಪೊಲೀಸ್ ಸಿಬ್ಬಂದಿಯಲ್ಲಿ ವೈರಸ್ ಪತ್ತೆ
ಕಾಲ್ನಡಿಗೆ ಮೂಲಕ ಹೋಗುವ ವಲಸೆ ಕಾರ್ಮಿಕರ ಆಹಾರ, ಆಶ್ರಯ ಬಗ್ಗೆ ಸರ್ಕಾರಗಳೇ ತೀರ್ಮಾನಿಸಲಿ: ಸುಪ್ರೀಂ ಕೋರ್ಟ್
ಕೊರೊನಾ: ಭಾರತದಲ್ಲಿ ಮತ್ತೆ 100 ಸಾವು, 82 ಸಾವಿರದತ್ತ ಸೋಂಕಿತರ ಸಂಖ್ಯೆ
Advertisement