ಲಖನೌ: ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.
ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದು, 36 ಜನರು ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಲಸಿಗರ ಕಾರ್ಮಿಕರ ಸಾವಿನ ಬಗ್ಗೆ ತೀವ್ರ ನೋವಾಗುತ್ತಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಲಲಿ. ಎಲ್ಲ ಗೊತ್ತಿದ್ದರೂ ಹೃದಯ ಹೀನ ಜನರು ಹಾಗೂ ಅವರ ಬೆಂಬಲಿಗರು ನಿರ್ಲಕ್ಷ್ಯದ ಬಗ್ಗೆ ಮೌನ ವಹಿಸಿದ್ದಾರೆ. ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.
उप्र के औरैया में सड़क हादसे में 24 से भी अधिक ग़रीब प्रवासी मज़दूरों की मौत पर अवर्णनीय दुख. घायलों के लिए दुआएँ.
सब कुछ जानकर... सब कुछ देखकर भी... मौन धारण करनेवाले हृदयहीन लोग और उनके समर्थक देखें कब तक इस उपेक्षा को उचित ठहराते हैं.
ऐसे हादसे मृत्यु नहीं हत्या हैं.
— Akhilesh Yadav (@yadavakhilesh) May 16, 2020
Advertisement