ಬನಿಹಾಲ್/ಜಮ್ಮು: ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವುಂಟಾಗಿ ಇಬ್ಬರು ಮೃತಪಟ್ಟಿದ್ದಾರೆ.
ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿಯಲ್ಲಿ ರಕ್ಷಣಾ ಕಾರ್ಯಕರ್ತರೊಬ್ಬರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದ್ದು ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತದಿಂದಾಗಿ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿನ್ನೆ ಸೀರಿ ರಂಬನ್ ಟೌನ್ ಹತ್ತಿರ ಕಡಿತಗೊಂಡಿದೆ. 9 ವಾಹನಗಳಿಗೆ ಹಾನಿಯಾಗಿದೆ. ಇವುಗಳಲ್ಲಿ ಟ್ರಕ್ ಮತ್ತು ಅಗೆಯುವ ಯಂತ್ರಗಳಾಗಿವೆ.
Advertisement