ಅರ್ನಬ್ ಗೋಸ್ವಾಮಿಗೆ 3 ವಾರ ಬಂಧನ ಭೀತಿಯಿಲ್ಲ: ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.
ಅರ್ನಬ್ ಗೋಸ್ವಾಮಿ
ಅರ್ನಬ್ ಗೋಸ್ವಾಮಿ

ನವದೆಹಲಿ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.

ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರದ ತನ್ನ ತೀರ್ಪಿನಲ್ಲಿ, ಮಧ್ಯಂತರ ರಕ್ಷಣೆಯನ್ನು ಇನ್ನೂ ಮೂರು ವಾರಗಳವರೆಗೆ ವಿಸ್ತರಿಸಿದೆ. ಪಾಲ್ಘರ್ ಪ್ರಕರಣ ಸೇರಿದಂತೆ ರಿಪಬ್ಲಿಕ್ ಟಿವಿಯಲ್ಲಿ ನಡೆದ ಚರ್ಚೆಗಳಲ್ಲಿ ಅವರ ಹೇಳಿಕೆ ಸಂಬಂಧ ನಡೆದ ವಿಚಾರಣೆಯಲ್ಲಿ ಈ  ಆದೇಶ ನೀಡಲಾಗಿದೆ.

"ಅರ್ಜಿದಾರರ ವಿರುದ್ಧ ಮೂರು ವಾರಗಳವರೆಗೆ ಯಾವುದೇ ಬಲವಂತದ ಕ್ರಮದಿಂದ ನ್ಯಾಯಾಲಯವು ಮಧ್ಯಂತರ ರಕ್ಷಣೆ ನೀಡುತ್ತದೆ" ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com