ಲಾಕ್ ಡೌನ್ ನಿಯಮ ಉಲ್ಲಂಘನೆ: ಮಧ್ಯಪ್ರದೇಶ ಆಧ್ಯಾತ್ಮಿಕ ಗುರೂಜಿ ಅಂತ್ಯಕ್ರಿಯೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಭಾಗಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮಧ್ಯ ಪ್ರದೇಶದ ಪ್ರಸಿದ್ಧ ಆದ್ಯಾತ್ಮಿಕ ಗುರೂಜಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ.
ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಜನ
ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಜನ

ನವದೆಹಲಿ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮಧ್ಯ ಪ್ರದೇಶದ ಪ್ರಸಿದ್ಧ ಆದ್ಯಾತ್ಮಿಕ ಗುರೂಜಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ.

ಸಾಮಾನ್ಯ ಜನರ ಜೊತೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಕೂಡ ಅಂತ್ಯ ಕ್ರಿಯೆಯಲ್ಲಿ ಭಾಹವಹಿಸಿದ್ದು ಚರ್ಚೆಗೆ ಕಾರಣವಾಗಿದೆ, ದಾದಾಜಿ ಎಂದು ಪ್ರಸಿದ್ಧವಾಗಿದ್ದ ದೇವ್ ಪ್ರಭಾಕರ್ ಶಾಸ್ತ್ರಿ ಕಿಡ್ನಿ ಸಮಸ್ಯೆಯಿಂದ ಸಾವನ್ನಪ್ಪಿದ್ದರು.

ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ ಅವರ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವ  ಸಂಜಯ್ ಪಾಠಕ್ ಗುರೂಜಿಯನ್ನು ಆಸ್ಪತ್ರೆಯಿಂದ ಮಧ್ಯಪ್ರದೇಶಕ್ಕೆ ಕರೆ ತಂದಿದ್ದರು.ಲಾಕ್ ಡೌನ್ ಅಂತ್ಯ ಸಂಸ್ಕಾರ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೋಂಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com