ಖಂದ್ವ: ಬಿಸಿ ಚಪಾತಿ ನೀಡಲಿಲ್ಲವೆಂದು ಅತ್ತೆಯನ್ನು ಅಳಿಯ ಹೊಡೆದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.
35 ವರ್ಷದ ವ್ಯಕ್ತಿ ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿ ಸುರೇಶ್, ಖಂದ್ವ ಜಿಲ್ಲೆಯ ಬಿಲ್ಲೋರ ಗ್ರಾಮದಲ್ಲಿ ಅತ್ತೆ ಮಾವನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸ್ ಠಾಣಾಧಿಕಾರಿ ಜಗದೀಶ್ ಪಾಟೀದಾರ್ ಹೇಳಿದ್ದಾರೆ. ಮಧ್ಯರಾತ್ರಿ ವೇಳೆ ಮನೆಗೆ ಆಗಮಿಸಿದ್ದ ಆರೋಪಿಗೆ ಆತನ ಅತ್ತೆ ಗುಜರ್ ಬಾಯಿ (55) ಊಟ ಬಡಿಸಿದ್ದರು.
ಆದರೆ ಆರೋಪಿ ಬಿಸಿ ಚಪಾತಿ ಕೇಳಿದ್ದ, ಇದಕ್ಕೆ ಒಪ್ಪದ ಅತ್ತೆಯ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಆಕೆ ಸಾವನ್ನಪ್ಪಿದ್ದಾರೆ. ಉಳಿದ ಕುಟುಂಬ ಸದಸ್ಯರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಆರೋಪಿಯ ಮಾವ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ರಾತ್ರಿ ಆರೋಪಿ ಸುರೇಶ್ ನ್ನು ಪೊಲೀಸರು ಬಂಧಿಸಿದ್ದಾರೆ.
Advertisement