ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊಲೆ ಬೆದರಿಕೆ: ಮುಂಬಯಿ ವ್ಯಕ್ತಿ ಬಂಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಮುಂಬಯಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲ್ಲುವ ಬೆದರಿಕೆ ಹಾಕಿದ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬಯಿ ಪೂರ್ವ ಉಪನಗರದ ಚುನಾಬಟ್ಟಿಯ ಕಮ್ರಾನ್ ಖಾನ್ ಬಂಧಿತ ಆರೋಪಿ. ಈತನನ್ನು ಮಹಾರಾಷ್ಟ್ರ ಎಟಿಎಸ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಶುಕ್ರವಾರ ಬೆಳಗ್ಗೆ  ಉತ್ತರ ಪ್ರದೇಶ ಪೊಲೀಸರ ಸಾಮಾಜಿಕ ಮಾಧ್ಯಮದ ಹೆಲ್ಪ್ ಡೆಸ್ಕ್ ಗೆ ಕರೆ ಮಾಡಿದ ಆರೋಪಿ ಬಾಂಬ್ ಬ್ಲಾಸ್ಟ್  ಮಾಡಿ ಯೋಗಿ ಆದಿತ್ಯನಾಥ್ ರನ್ನು ಕೊಲ್ಲುವ ಬೆದರಿಕೆ ಒಡ್ಡಿದ್ದಾನೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಗೋಮತಿನಗರ ಪೊಲೀಸರು ಕಾಲ್ ಟ್ರೇಸ್ ಮಾಡಿ ಮುಂಬಯಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ನಡೆಸಿದ ಮಹಾರಾಷ್ಟ್ರ ಎಟಿಎಸ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com