ವಿಮಾನದಲ್ಲಿ ಏಕಾಂಗಿಯಾಗಿ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ 5 ವರ್ಷದ ಮಗು! 

ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.   
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು: ಭಾರತದಲ್ಲಿ ದೇಶಿ ವಿಮಾನ ಪ್ರಯಾಣ ಪ್ರಾರಂಭವಾಗುತ್ತಿದ್ದಂತೆಯೇ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ವಿಶೇಷ ಘಟನೆಯೊಂದು ವರದಿಯಾಗಿದೆ.   

ದೆಹಲಿಯಿಂದ ಕೆಐಎಎಲ್ ಗೆ ಬಂದಿಳಿದ ವಿಮಾನದಲ್ಲಿ 5 ವರ್ಷದ ಬಾಲಕ ಏಕಾಂಗಿಯಾಗಿ ಬಂದಿರುವುದನ್ನು ಸ್ಥಳೀಯ ಸುದ್ದಿವಾಹಿನಿ ವರದಿ ಮಾಡಿದೆ. 3 ತಿಂಗಳ ಹಿಂದೆ ಅಜ್ಜ-ಅಜ್ಜಿಯನ್ನು ನೋಡಲು ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಬಾಲಕ ಲಾಕ್ ಡೌನ್ ಹಿನ್ನೆಲೆಯಲ್ಲಿ ದೆಹಲಿಯಲ್ಲೇ ಇರುವಂತಾಗಿತ್ತು. ಈಗ ವಿಮಾನ ಸೌಲಭ್ಯ ಪುನಾರಂಭಗೊಂಡಿರುವುದರಿಂದ  ಬಾಲಕನ ಪೋಷಕರು ಮಗನನ್ನು ವಾಪಸ್ ಕರೆಸಿಕೊಂಡಿದ್ದಾರೆ. 

5 ವರ್ಷದ ಬಾಲಕನನ್ನು ವಾಪಸ್ ಕರೆಸಿಕೊಳ್ಳಲು ಬೆಂಗಳೂರಿನಲ್ಲಿರುವ ಆತನ ಪೋಷಕರು ಅಧಿಕಾರಿಗಳಿಗೆ ಮನವಿ ಮಾಡಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಬೇಕೆಂದು ಕೇಳಿದ್ದರು. ಅಧಿಕಾರಿಗಳು ಸ್ಪಂದಿಸಿದ್ದು, ಬಾಲಕನನ್ನು ಏಕಾಂಗಿಯಾಗಿ ವಿಮಾನದಲ್ಲಿ ಕಳಿಸುವುದಕ್ಕೆ ವ್ಯವಸ್ಥೆ ಮಾಡಿದ್ದಾರೆ. 

ದೆಹಲಿಯಲ್ಲಿ ವಿಮಾನ ಬಂದಿಳಿಯುತ್ತಿದ್ದಂತೆಯೇ ಬಾಲಕನನ್ನು ಆತನ ತಾಯಿ ಬಂದು ಕರೆದುಕೊಂಡು ಹೋಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com