ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ

ಮಧುರೈ ಜಿಲ್ಲೆಯ ಪ್ರಸಿದ್ಧ ಭಗವಾನ್ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೆಣ್ಣು ಆನೆ ದೈವಾನಿ ತನ್ನ ಮಾವುತನನ್ನು ತುಳಿದು ಕೊಂದಿರುವ ದುರಂತ ಘಟನೆ ಜರುಗಿದೆ.
ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ
ತಮಿಳುನಾಡು: ಮಾವುತನನ್ನು ಕೊಂದ ದೇವಾಲಯದ ಆನೆ

ಮಧುರೈ: ಮಧುರೈ ಜಿಲ್ಲೆಯ ಪ್ರಸಿದ್ಧ ಭಗವಾನ್ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಸೇರಿದ ಹೆಣ್ಣು ಆನೆ ದೈವಾನಿ ತನ್ನ ಮಾವುತನನ್ನು ತುಳಿದು ಕೊಂದಿರುವ ದುರಂತ ಘಟನೆ ಜರುಗಿದೆ.

ಭಾನುವಾರ ರಾತ್ರಿ ಮಾವುತ ಕಾಲಿಮುತ್ತು 14 ವರ್ಷ ವಯಸ್ಸಿನ ಹೆಣ್ಣಾನೆಯನ್ನು ಸ್ನಾನಕ್ಕೆ ಕರೆದೊಯ್ಯುವಾಗ ಈ ಘಟನೆ ನಡೆದಿದೆ. ಆನೆ ತನ್ನ ಸೊಂಡಿಲಿನಿಂದ ಕಾಲಿಮುತ್ತುವನ್ನು ಎಸೆದು ಮುಂಭಾಗದ ಕಾಲಿನಿಂದ ಮೆಟ್ಟಿತು ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಮಾವುತನನ್ನು ಸರ್ಕಾರಿ ರಾಜಾಜಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com