ಮುಜಾಫರ್ ನಗರ: ಲಾಕ್ ಡೌನ್ ನಿಷೇಧದ ನಡುವೆಯೂ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನಡೆಸಿದ 25 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ 25 ಮಂದಿ ವಿರುದ್ಧ ಕೇಸ್ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಟೌಲಿ ಪಟ್ಟಣಕ್ಕೆ ಆಗಮಿಸಿದ ಪೊಲೀಸರು ಅಲ್ಲಿ ಸೇರಿದ್ದ ಜನರನ್ನು ಚದುರಿಸಿದ್ದಾರೆ, ಆದೇಶ ಉಲ್ಲಂಘನೆಯ ಸೆಕ್ಷನ್ 188ರ ಅಡಿಯಲ್ಲಿ 25 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ.
Advertisement