ನವದೆಹಲಿ: ಪತ್ರಕರ್ತ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವ ಕ್ರಮವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದಿರುವ ಹಲ್ಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಮಾಧ್ಯಮವನ್ನು ಪರಿಗಣಿಸುವ, ಪತ್ರಿಕಾ ಸ್ವಾತಂತ್ರ್ಯಕ್ಕೆ ನೀಡುವ ಗೌರವ ಇದಲ್ಲ. ಇಂದಿನ ಘಟನೆ ತುರ್ತು ಪರಿಸ್ಥಿತಿ ಸಂದರ್ಭವನ್ನು ನೆನಪು ಮಾಡಿಸುತ್ತಿದೆ, ಆ ಸಮಯದಲ್ಲಿ ಮಾಧ್ಯಮ, ಪತ್ರಿಕೆಗಳನ್ನು ಈ ರೀತಿ ಕಾಣಲಾಗುತ್ತಿತ್ತು ಎಂದು ಟ್ವೀಟ್ ಮಾಡಿದ್ದಾರೆ.
Advertisement