ಅಭಿವೃದ್ಧಿಗಾಗಿ ನಿತೀಶ್ ಕುಮಾರ್ ಸರ್ಕಾರದ ಅಗತ್ಯವಿದೆ- ಪ್ರಧಾನಿ ನರೇಂದ್ರ ಮೋದಿ

ಕಲ್ಯಾಣ ಯೋಜನೆಗಳು ಅಡಚಣೆ ಇಲ್ಲದೆ ಮುಂದುವರೆಯಲು ಮತ್ತು ಬಿಹಾರ ರಾಜ್ಯದ ಅಭಿವೃದ್ಧಿಗಾಗಿ ನನಗೆ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ಪಾಟ್ನಾ: ಜನ ಕಲ್ಯಾಣ ಯೋಜನೆಗಳು ಅಡಚಣೆ ಇಲ್ಲದೆ ಮುಂದುವರೆಯಲು ಮತ್ತು ಬಿಹಾರ ರಾಜ್ಯದ ಅಭಿವೃದ್ಧಿಗಾಗಿ ನನಗೆ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶನಿವಾರ ನಡೆಯಲಿರುವ ಮೂರನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರ ಜನರಿಗೆ ಬಹಿರಂಗ ಪತ್ರ ಬರೆದಿರುವ ನರೇಂದ್ರ ಮೋದಿ, ಎನ್ ಡಿಎ ಸರ್ಕಾರ ಮಾತ್ರ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಬಲ್ಲದು ಎಂಬ ಸಂಪೂರ್ಣ ನಂಬಿಕೆ ಜನರಿಗೆ ಇದೆ ಎಂದು ಮೋದಿ ತಿಳಿಸಿದ್ದಾರೆ.

ಡಬಲ್ ಎಂಜಿನ್ ಶಕ್ತಿಯಿಂದ ಈ ದಶಕದಲ್ಲಿ ಬಿಹಾರವನ್ನು ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ ಸಂಪೂರ್ಣ ನಂಬಿಕೆ ಹೊಂದಿರುವುದಾಗಿ ಮೋದಿ ಹೇಳಿದ್ದಾರೆ.

ಹಿಂದಿಯಲ್ಲಿ ನಾಲ್ಕು ಪುಟಗಳಲ್ಲಿರುವ ಪತ್ರದಲ್ಲಿ ವಿದ್ಯುತ್, ನೀರು, ರಸ್ತೆ, ಆರೋಗ್ಯ, ಶಿಕ್ಷಣ ಮತ್ತು ಕಾನೂನು ಸುವ್ಯವಸ್ಥೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಎನ್ ಡಿಎ ಕೆಲಸ ಮಾಡಿದ್ದು, ಬಿಹಾರ ಚುನಾವಣೆಗಳಲ್ಲಿ ಅಭಿವೃದ್ಧಿಯತ್ತ ಗಮನ ಹರಿಸಲಾಗಿದೆ ಎಂಬುದು ಹೆಮ್ಮೆಯ ವಿಷಯ ಎಂದಿದ್ದಾರೆ.     

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com