ನವದೆಹಲಿ: ಕೊನೆ ಚುನಾವಣೆ ಎಂದು ಹೇಳುವ ಮೂಲಕ ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಲೇವಡಿ ಮಾಡಿದ್ದಾರೆ. ಕೊನೆ ಚುನಾವಣೆ ಎಂದು ನಿತೀಶ್ ಹೇಳುವ ಮೂಲಕ ಜನರ ಅನುಕಂಪ ಬಯಸುತ್ತಿದ್ದಾರೆ ಎಂದು ಚಿದಂಬರಂ ಆರೋಪಿಸಿದ್ದಾರೆ.
ಬಿಹಾರದಲ್ಲಿ ಯಾವುದೇ ಅಭಿವೃದ್ಧಿ ಮಾಡದ ನಿತೀಶ್ ಕುಮಾರ್ ಅನುಕಂಪದ ಮೇಲೆ ಮತ ಕೇಳುತ್ತಿದ್ದಾರೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದ ಮೊದಲ ದಿನದಿಂದ ಕುಂಟು ಬಾತುಕೋಳಿಯಾಗುವ ವ್ಯಕ್ತಿಗೆ ಬಿಹಾರ ಜನತೆ ಏಕೆ ಮತ ಹಾಕಬೇಕು ಎಂದು ಪ್ರಶ್ನಿಸಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಯ ಮೂರನೇ ಹಂತದ ಪ್ರಚಾರದ ಕೊನೆಯ ದಿನದಂದು, ರಾಜ್ಯದಲ್ಲಿ ವಿಧಾನಸಭಾ ತಮ್ಮ ಕೊನೆಯ ಚುನಾವಣೆಗಳು ಎಂದು ಹೇಳುವ ಮೂಲಕ ನಿತೀಶ್ ಕುಮಾರ್ ನೆರೆದಿದ್ದವರನ್ನು ಬೆರಗುಗೊಳಿಸಿದರು.
Advertisement