ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ತಾವು ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರಕ್ಕೆ ದೀಪಾವಳಿಗೂ ಮುನ್ನ ಭರ್ಜರಿ ಉಡುಗೊರೆ ನೀಡಿದ್ದಾರೆ.
ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ 614 ಕೋಟಿ ರೂಪಾಯಿ ಮೌಲ್ಯದ ಕೃಷಿ, ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಸೇರಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಶಿಲಾನ್ಯಾಸವನ್ನು ಪ್ರಧಾನಿ ನರೇಂದ್ರ ಮೋದಿ ನ.11 ರಂದು ನೆರವೇರಿಸಿದ್ದಾರೆ.
ಈ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಸಂವಹನ ನಡೆಸಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹ ಉಪಸ್ಥಿತರಿದ್ದರು.
ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆ, ರಾಮನಗರ, ಗೋವುಗಳ ಸಂರಕ್ಷಣೆ, ಸಂಪೂರ್ಣಾನಂದ ಸ್ಟೇಡಿಯಂ ನಲ್ಲಿ ಕ್ರೀಡಾಪಟುಗಳಿಗೆ ವಸತಿ ಸಂಕೀರ್ಣ ಸೇರಿದಂತೆ ಹಲವು ಯೋಜನೆಗಳಿಗೆ ಶಿಲಾನ್ಯಾಸ, ಶಂಕುಸ್ಥಾಪನೆ ನೆರವೇರಿದೆ.
Advertisement