ಬಿಹಾರ ಚುನಾವಣೆ ಫಲಿತಾಂಶ: ಸ್ವಪಕ್ಷದ ವಿರುದ್ಧ ಕಾಂಗ್ರೆಸ್ ನಾಯಕ ತಾರೀಕ್ ಅನ್ವರ್ ಅಸಮಾಧಾನ 

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನದಿಂದಾಗಿಯೇ ಮಹಾಘಟಬಂಧನ ಸರ್ಕಾರ ರಚನೆ ಸಾಧ್ಯತೆ ಕ್ಷೀಣಿಸಿದ್ದು ಎಂದು ಕಾಂಗ್ರೆಸ್ ನ ನಾಯಕ ತಾರೀಕ್ ಅನ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ತಾರೀಕ್ ಅನ್ವರ್
ಕಾಂಗ್ರೆಸ್ ನಾಯಕ ತಾರೀಕ್ ಅನ್ವರ್

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನದಿಂದಾಗಿಯೇ ಮಹಾಘಟಬಂಧನ ಸರ್ಕಾರ ರಚನೆ ಸಾಧ್ಯತೆ ಕ್ಷೀಣಿಸಿದ್ದು ಎಂದು ಕಾಂಗ್ರೆಸ್ ನ ನಾಯಕ ತಾರೀಕ್ ಅನ್ವರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಎಐಎಂಐಎಂ ಬಿಹಾರದಲ್ಲಿ ಪ್ರವೇಶಿಸಿರುವುದರ ಬಗ್ಗೆಯೂ ತೀವ್ರ ಆತಂಕವನ್ನು ತಾರೀಕ್ ಅನ್ವರ್ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅನ್ವರ್, ಸರಣಿ ಟ್ವೀಟ್ ಗಳಲ್ಲಿ ಕಾಂಗ್ರೆಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, " ನಾವು ಸತ್ಯವನ್ನು ಒಪ್ಪಿಕೊಳ್ಳಬೇಕು, ಕಾಂಗ್ರೆಸ್ ನ ಕಳಪೆ ಪ್ರದರ್ಶನದಿಂದಾಗಿಯೇ ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರದ ಕನಸು ಭಗ್ನಗೊಂಡಿದೆ. ತುರ್ತಾಗಿ ದೀರ್ಘವಾದ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಅನ್ವರ್ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಹೇಗೆ ಹಿಂದೂಗಳನ್ನು ಬೆಂಬಲಿಸುತ್ತದೆಯೋ ಹಾಗೆಯೇ ಎಐಎಂಐಎಂ ಮುಸ್ಲಿಮರನ್ನು ಬೆಂಬಲಿಸುತ್ತದೆ. ಈ ಕಾರಣಕ್ಕಾಗಿ ಬಿಹಾರದಲ್ಲಿ ಎಐಎಂಐಎಂ ಉತ್ತಮ ಪ್ರದರ್ಶನ ನೀಡಿರುವುದು ಒಳ್ಳೆಯ ಲಕ್ಷಣವಲ್ಲ ಎಂದು ತಾರೀಕ್ ಅನ್ವರ್ ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com