ನಿತೀಶ್ ಕುಮಾರ್ ರಾಜಕೀಯವಾಗಿ ಬಳಲಿರುವ ತಿರಸ್ಕೃತ ನಾಯಕ: ಪ್ರಶಾಂತ್ ಕಿಶೋರ್ ಲೇವಡಿ

ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ರಾಜಕೀಯವಾಗಿ ಬಳಲಿರುವ ತಿರಸ್ಕೃತ  ನಾಯಕ ಆಗಿದ್ದಾರೆ ಎಂದು ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಪ್ರಶಾಂತ್ ಕಿಶೋರ್ ಮತ್ತು ನಿತೀಶ್ ಕುಮಾರ್ (ಸಂಗ್ರಹ ಚಿತ್ರ)
ಪ್ರಶಾಂತ್ ಕಿಶೋರ್ ಮತ್ತು ನಿತೀಶ್ ಕುಮಾರ್ (ಸಂಗ್ರಹ ಚಿತ್ರ)

ನವದೆಹಲಿ: ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ರಾಜಕೀಯವಾಗಿ ಬಳಲಿರುವ ತಿರಸ್ಕೃತ  ನಾಯಕ ಆಗಿದ್ದಾರೆ ಎಂದು ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಒಂದೊಮ್ಮೆ ನಿತೀಶ್ ಕುಮಾರ್ ಆಪ್ತರಾಗಿದ್ದ ಪ್ರಶಾಂತ್ ಕಿಶೋರ್ ಅವರನ್ನು ಜೆಡಿಯು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಬಿಹಾರವು ಇನ್ನಷ್ಟು ವರ್ಷಗಳವರೆಗೆ ನೀರಸ ಆಡಳಿತ ಅನುಭವಿಸಬೇಕಾಗಿದೆ ಎಂದು ಚುನಾವಣಾ ಪ್ರಶಾಂತ್‌ ಕಿಶೋರ್ ವ್ಯಂಗ್ಯವಾಡಿದ್ದಾರೆ.

‘ಬಿಜೆಪಿ ನಾಮನಿರ್ದೇಶಿತ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ರಾಜಕೀಯವಾಗಿ ತಿರಸ್ಕೃತ, ಬಳಲಿದ ನಾಯಕ ಮುಖ್ಯಮಂತ್ರಿಯಾಗಿರುವುದರಿಂದ ಬಿಹಾರವು ಇನ್ನಷ್ಟು ವರ್ಷಗಳ ಕಾಲ ನೀರಸ ಆಡಳಿತ ಅನುಭವಿಸಬೇಕಾಗಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com