ಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆ

ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ.
ಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆ
ಹೈದರಾಬಾದ್ ಪಾಲಿಕೆ ಚುನಾವಣೆ: ಸಚಿವ ಡಾ.ಕೆ.ಸುಧಾಕರ್ ಅವರಿಗೆ 4 ವಿಧಾನಸಭಾ ಕ್ಷೇತ್ರಗಳ ಹೊಣೆ

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಚುನಾವಣೆಯ ಸಹ ಉಸ್ತುವಾರಿಯಾಗಿ ಬಿಜೆಪಿ ಪಕ್ಷದಿಂದ ನೇಮಕಗೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ನಾಲ್ಕು ವಿಧಾನಸಭಾ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ.

ಪಾಲಿಕೆ ಚುನಾವಣೆಯ ಸಹ-ಉಸ್ತುವಾರಿ ಹೊತ್ತಿರುವ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮಲ್ಕಾಗಿರಿ, ಖುತ್ಬುಲ್ಲಾಪುರ್, ಕುಕ್ಕಟ್ಪಲ್ಲಿ ಹಾಗೂ ಉಪ್ಪಳ್ ಕ್ಷೇತ್ರಗಳ ಹೊಣೆಯನ್ನು ವಹಿಸಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿರುವ ಸಚಿವ ಡಾ.ಕೆ.ಸುಧಾಕರ್, ಇಂದು ಪಕ್ಷದ ಪ್ರಮುಖರೊಂದಿಗೆ ಸಭೆಯಲ್ಲಿ ಪಾಲ್ಗೊಂಡು, ಚುನಾವಣಾ ಕಾರ್ಯತಂತ್ರದ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಹೈದರಾಬಾದ್ ನ ರಾಜ್ಯ ಬಿಜೆಪಿ ಕಚೇರಿಗೆ ತೆರಳಿದ ಸಚಿವರು, ಪಕ್ಷದ ಪ್ರಮುಖರೊಂದಿಗೆ ಸಭೆಯಲ್ಲಿ ಭಾಗವಹಿಸಿ ಚರ್ಚೆ ಮಾಡಿದರು. ಚುನಾವಣೆಯ ಉಸ್ತುವಾರಿ ಹೊತ್ತಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಶ್ರೀ ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾದ ಡಿ.ಕೆ.ಅರುಣ, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಶ್ರೀ ಕೆ.ಲಕ್ಷ್ಮಣ್, ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಮಹಾರಾಷ್ಟ್ರ ವಿಧಾನಸಭೆಯ ಮುಖ್ಯ ಸಚೇತಕ ಆಶಿಷ್ ಶೆಲ್ಲಾರ್, ಗುಜರಾತ್ ಬಿಜೆಪಿ ಹಿರಿಯ ನಾಯಕ ಪ್ರದೀಪ್ ಸಿಂಹ ವಘೇಲ, ಶಾಸಕ ಸತೀಶ್ ರೆಡ್ಡಿ, ರಾಜ್ಯ ಎಸ್.ಸಿ.ಮೋರ್ಚಾ ಅಧ್ಯಕ್ಷ ರಾಮುಲು, ಜನಪ್ರತಿನಿಧಿಗಳು ಹಾಗೂ ಇತರೆ ಮುಖಂಡರು ಸಭೆಯಲ್ಲಿದ್ದರು.

ಇದೇ ವೇಳೆ ಸಚಿವ ಡಾ.ಕೆ.ಸುಧಾಕರ್ ಅವರು ತೆಲಂಗಾಣ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com