ನವದೆಹಲಿ: ಉತ್ತರಪ್ರದೇಶಕ್ಕೆ ಸೇರಿದ ಸಾರಿಗೆ ಬಸ್'ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಆಗ್ರಾದಿಂದ ಬಂದ ಉತ್ತರಪ್ರದೇಶದ ಸಾರಿಗೆ ಬಸ್ ದೆಹಲಿ ಸುಖ್ದೇವ್ ವಿಹಾರ್ ಬಳಿಯಿರುವ ಮರವೊಂದಕ್ಕೆ ಇಂದು ಬೆಳಗಿನ ಜಾವ 3.20ರ ಸುಮಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಗಳು ತಿಳಿಸಿವೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Advertisement