ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಬಿಎಸ್ಎಫ್ ಗಸ್ತು ತಿರುಗುವ ವೇಳೆ ಸುರಂಗ ಪತ್ತೆಯಾಗಿದೆ.
ಸಾಂಬ ಜಿಲ್ಲೆಯಲ್ಲಿ ಈ ಸುರಂಗ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಇದು ಕಾರಣವಾಗಿದೆ.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಇದನ್ನು ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸುವುದಕ್ಕೆ ಬಳಕೆ ಮಾಡಲಾಗುತ್ತಿತ್ತು. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ.
ಪಾಕಿಸ್ತಾನ ಭಯೋತ್ಪಾದಕರನ್ನು ಭಾರತದ ಗಡಿಯೊಳಗೆ ನುಗ್ಗಿಸುವುದಕ್ಕಾಗಿ ಸುರಂಗಗಳನ್ನು ಬಳಕೆ ಮಾಡುತ್ತಿದ್ದು, ಆಗಾಗ್ಗೆ ಈ ರೀತಿಯ ಸುರಂಗಗಳು ಪತ್ತೆಯಾಗುತ್ತಿವೆ.
Advertisement