ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ 

 ತಮಿಳು ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮನೆ ತಪಾಸಣೆ ನಡೆಸಿದ ಪೊಲೀಸರು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.
ಚಿಯಾನ್ ವಿಕ್ರಂ
ಚಿಯಾನ್ ವಿಕ್ರಂ

ಚೆನ್ನೈ: ತಮಿಳು ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮನೆ ತಪಾಸಣೆ ನಡೆಸಿದ ಪೊಲೀಸರು ಇದೊಂದು ಹುಸಿ ಕರೆ ಎಂದು ಹೇಳಿದ್ದಾರೆ.

ವಿಕ್ರಂ ಅವರಿಗೆ ಸೇರಿದ್ದ ಚೆನ್ನೈನ ಬೆಸೆಂಟ್ ನಗರದ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ  ಇಂದು ಮಧ್ಯಾಹ್ನ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಬಂದಿತ್ತು. ಬಾಂಬ್ ನಿಷ್ಕ್ರೀಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯಲ್ಲಿ ತಪಾಸಣೆ ನಡೆಸಿದರು. ಬಳಿಕ ಇದೊಂದು ಹುಸಿ ಕರೆ ಎಂದು ಅವರು ತಿಳಿಸಿದರು. 

ಈ ಹಿಂದೆ ನಟರಾದ ಅಜಯ್, ಅಜಿತ್ , ಸೂರ್ಯ, ವಿಜಯ ಕಾಂತ್ ಮತ್ತು ರಜನಿಕಾಂತ್ ಅವರು ಸಹ ಇಂತಹ ಕರೆಗಳನ್ನು ಸ್ವೀಕರಿಸಿದ್ದಾರೆ.ಈ ಹಿಂದಿನ ಪ್ರಕರಣಗಳಲ್ಲಿ ವಿಲ್ಲುಪುರಂನ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಮತ್ತಿತರ ನಟರಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ. ಇದೇ ವ್ಯಕ್ತಿ ಇದರಲ್ಲಿ ತೊಡಗಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com