ಶ್ರೀನಗರ: ಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಈ ವೇಳೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.
ಲ್ಯಾನ್ಸ್ ನಾಯ್ಕ್ ಕರ್ನಲ್ ಸಿಂಗ್ ಅವರು ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಹುತಾತ್ಮರಾಗಿದ್ದಾರೆಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾನ್ಕೋಟ್ ಸೆಕ್ಟರ್ನಲ್ಲಿಯೂ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣಾ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡು ಹಾರಿಸುವ ಮೂಲಕ ಪಾಕಿಸ್ತಾನ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸಿವೆ.
ಬುಧವಾರ ಸಂಜೆ 6.45ರ ಸುಮಾರಿಗೆ ಪಾಕ್ ಪಡೆಗಳು ಸಣ್ಣ ಶಸ್ತ್ರಾಸ್ತ್ರಗಳೊಂದಿಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಮಾತ್ರವಲ್ಲದೆ, ಮಾನ್ಕೋಟ್ ಸೆಕ್ಟರ್ನಲ್ಲಿ ಮಾರ್ಟಾರ್ಗಳೊಂದಿಗೆ ತೀವ್ರವಾದ ಶೆಲ್ ದಾಳಿ ನಡೆಸಿವೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಪಾಕ್ ನ ಗುಂಡಿನ ದಾಳಿಗೆ ಭಾರತೀಯ ಸೇನೆ, ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.
Advertisement