ನಿತೀಶ್ ಕುಮಾರ್ ನೇತೃತ್ವದ ಜೆಡಿ(ಯು) ಜತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಚಿರಾಗ್ ಪಾಸ್ವಾನ್ ಘೋಷಣೆ

ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲೇ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಲ್ಲಿನ ಭಿನ್ನಮತ ಸ್ಪೋಟಗೊಂಡಿದೆ.
ಚಿರಾಗ್ ಪಾಸ್ವಾನ್
ಚಿರಾಗ್ ಪಾಸ್ವಾನ್

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲೇ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಲ್ಲಿನ ಭಿನ್ನಮತ ಸ್ಪೋಟಗೊಂಡಿದೆ.

ಈ ಸಂಬಂದ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ) ನಾಯಕ ಚಿರಾಗ್ ಪಾಸ್ವಾನ್ “ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ನೇತೃತ್ವದ ಜೆಡಿ(ಯು) ನೊಂದಿಗೆ ಸೇರಿ ಪಕ್ಷ ಚುನಾವಣೆ ಎದುರಿಸುವುದಿಲ್ಲ ಎಂದು ಪ್ರಕಟಿಸಿದ್ದಾರೆ. ಜೆಡಿಯು- ಬಿಜೆಪಿ ನಡುವೆ ಸೀಟುಗಳ ಹಂಚಿಕೆ ಸೂತ್ರ ಈಗಾಗಲೇ ಪೂರ್ಣಗೊಂಡಿವೆ.  ಇಂತಹ ಪರಿಸ್ಥಿತಿ ಸನ್ನಿವೇಶದಲ್ಲೂ ಚಿರಾಗ್ ಅವರ ಹೇಳಿಕೆ ಎನ್ ಡಿಎ ಮೈತ್ರಿಕೂಟ ಪಕ್ಷದೊಳಗಿನ ಬೇಗುದಿ ಹೊರಹೊಮ್ಮುವ ಸಾಧ್ಯತೆಗಳು ಕಂಡುಬರುತ್ತಿವೆ.

ಜೆಡಿ(ಯು) ಪಕ್ಷದೊಂದಿಗೆ ಎಲ್ ಜೆ ಪಿ ಮೊದಲಿನಿಂದಲೂ ಅಸಮಧಾನ ಹೊಂದಿದ್ದು, ನಮಗೆ ಜೆಡಿಯುನೊಂದಿಗೆ ಮಾತ್ರ ಸಮಸ್ಯೆಇದೆ, ಬಿಜೆಪಿಯೊಂದಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಚಿರಾಗ್ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಜೊತೆ ಸ್ಪರ್ಧಿಸುವುದಿಲ್ಲ ಎಂದು ಚಿರಾಗ್  ಘೋಷಿಸಿದ್ದಾರೆ.

ಭಾನುವಾರ ಎಲ್ ಜೆ ಪಿ ಕೇಂದ್ರೀಯ ಸಂಸದೀಯ ಮಂಡಳಿ ಸಭೆಯ ನಂತರ ಚಿರಾಗ್ ಮಾಧ್ಯಮಗಳೊಂದಿಗೆ ಮಾತನಾಡಿ.. ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಜೊತೆ ಕೂಡಿ ಜನ ಶಕ್ತಿ ಪಕ್ಷ ಸ್ಪರ್ಧಿಸುವುದಿಲ್ಲ. ಇಂದು ನಡೆದ ಸಮಾವೇಶದಲ್ಲಿ ಇದೇ ವಿಷಯದ ಬಗ್ಗೆ ಪ್ರಮುಖವಾಗಿ ಚರ್ಚಿಸಿದ್ದಾಗಿ, ಪಕ್ಷದ  ಸಂಸದೀಯ ಮಂಡಳಿ ಸಭೆ ಇದಕ್ಕೆ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com