ನವದೆಹಲಿ: ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಹೋದರ ಮತ್ತು ತಾಯಿಯೇ 19 ವರ್ಷದ ತಮ್ಮ ಮಗಳನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ನಾಲ್ವರೂ ಆರೋಪಿಗಳೂ ಈ ಪತ್ರಕ್ಕೆ ಸಹಿ ಹಾಕಿದ್ದು, ಈ ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ಆದರೂ ಸಹ ನಮ್ಮನ್ನು ವಿನಾ ಕಾರಣ ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಸಂದೀಪ್, ರಾಮು, ಲವಕುಶ್ ಹಾಗೂ ರವಿ ಅವರುಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರ ಬರೆದಿದ್ದು, ಹೆಬ್ಬೆಟ್ಟು ಹಾಕಿದ್ದಾರೆ.
ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಆಕೆಯೊಂದಿಗೆ ದೀರ್ಘಕಾಲದಿಂದಲೂ ಸಂಪರ್ಕದಲ್ಲಿದ್ದೆ. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ, ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ತಿಳಿಸಿದ್ದಾನೆ.
Advertisement