ಪ.ಬಂಗಾಳ ಬಿಜೆಪಿ ಕಾರ್ಯಕರ್ತರು, ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ; ಕೇಸರಿ ಕೇಡರ್‌ನಿಂದ ಬಂದೂಕು ವಶಕ್ಕೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕೇಸರಿ ಪಕ್ಷದ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ.
ಬಿಜೆಪಿ ಕಾರ್ಯಕರ್ತರು
ಬಿಜೆಪಿ ಕಾರ್ಯಕರ್ತರು

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಪೊಲೀಸರು ಕೇಸರಿ ಪಕ್ಷದ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ.

ಬಿಜೆಪಿ ಕಾರ್ಯಕರ್ತರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಸಚಿವಾಲಯದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು. ಆದರೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಕೇಸರಿ ಪಕ್ಷದ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಪೊಲೀಸರು ಹೌರಾದ ಸಂತಗಾಚಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು, ನೀರಿನ ಫಿರಂಗಿಯನ್ನು ಬಳಸಿದ್ದಾರೆ. ಇದಕ್ಕೆ ಜಗ್ಗದ ಕೇಸರಿ ಪಕ್ಷದ ಬೆಂಬಲಿಗರು ಬಂಗಾಳ ಪೊಲೀಸರೊಂದಿಗೆ ಘರ್ಷಣೆಗಿಳಿದ್ದಾರೆ. ಈ ವೇಳೆ ಪ್ರತಿಭಟನಾಕಾರರಲ್ಲಿ ಒಬ್ಬರಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಬ್ಯಾನರ್ಜಿ ಮತ್ತು ಸಂಸದ ಜ್ಯೋತಿರ್ಮೊಯ್ ಸಿಂಗ್ ಮಹತೋ ಅವರು ಗಾಯಗೊಂಡಿದ್ದಾರೆ.

ಬಿಜೆಪಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ನಾಲ್ಕು ಪ್ರಮುಖ ರ್ಯಾಲಿಗಳನ್ನು ಆಯೋಜಿಸಿದ್ದು, ಕೋಲ್ಕತಾ ಮತ್ತು ಹೌರಾದಿಂದ ತಲಾ ಎರಡು ಪ್ರತಿಭಟನಾ ರ್ಯಾಲಿಗಳು ರಾಜ್ಯ ಸಚಿವಾಲಯ ನಬಣ್ಣಾ ಕಡೆಗೆ ಸಾಗಲಿವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com