ಕೊಲ್ಕತ್ತಾ: ಬ್ಯಾರಿಕೇಡ್ ಮುರಿಯಲು ಬಿಜೆಪಿ ಕಾರ್ಯಕರ್ತರ ಯತ್ನ, ಪೊಲೀಸರಿಂದ ಅಶ್ರುವಾಯು, ಲಾಠಿ ಪ್ರಯೋಗ

ಪಶ್ಚಿಮ ಬಂಗಾಳದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ  'ನಬಣ್ಣ ಚಲೋ' ಪ್ರತಿಭಟನೆ ನಡೆಯುತ್ತಿದ್ದು, ಬ್ಯಾರಿಕೇಡ್ ಮುರಿಯಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ.  
ಲಾಠಿಜಾರ್ಜ್
ಲಾಠಿಜಾರ್ಜ್

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ  'ನಬಣ್ಣ ಚಲೋ' ಪ್ರತಿಭಟನೆ ನಡೆಯುತ್ತಿದ್ದು, ಬ್ಯಾರಿಕೇಡ್ ಮುರಿಯಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ.

ಪಕ್ಷದ ಭಾವುಟದೊಂದಿಗೆ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಬ್ಯಾರಿಕೇಡ್ ಗಳನ್ನು ಮುರಿಯಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯುವನ್ನು ಸಿಡಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಖೈದಿರ್ ಪುರ ಕಲ್ಲು ತೂರಾಟ ನಡೆಸಲಾಗಿದೆ.ಪೊಲೀಸರಿಗೆ ಇದು ಕಾಣಿಸಲಿಲ್ಲವೇ ಎಂದು ಬಿಜೆಪಿ ಮುಖಂಡೆ ಲಾಕೆಟ್ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com