ಕೇರಳ: ಪದ್ಮನಾಭಸ್ವಾಮಿಯ 10 ಅರ್ಚಕರಿಗೆ ಕೊರೋನಾ ಪಾಸಿಟಿವ್, ದೇವಸ್ಥಾನ ಬಂದ್

ಕೇರಳದ ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ 10 ಅರ್ಚಕರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅಕ್ಟೋಬರ್ 15 ರವರೆಗೆ ದೇವಸ್ಥಾನ ಬಂದ್ ಮಾಡಲಾಗಿದೆ.
ಪದ್ಮನಾಭಸ್ವಾಮಿ ದೇವಸ್ಥಾನ
ಪದ್ಮನಾಭಸ್ವಾಮಿ ದೇವಸ್ಥಾನ

ತಿರುವನಂತಪುರಂ: ಕೇರಳದ ತಿರುವನಂತಪುರಂನ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ 10 ಅರ್ಚಕರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅಕ್ಟೋಬರ್ 15 ರವರೆಗೆ ದೇವಸ್ಥಾನ ಬಂದ್ ಮಾಡಲಾಗಿದೆ.

ದೇವಾಲಯದ ಅಧಿಕಾರಿಗಳ ಪ್ರಕಾರ, ದೈನಂದಿನ ಪೂಜೆಯನ್ನು ತಂತ್ರಿಗಳು ನಡೆಸುತ್ತಾರೆ. ಆದರೆ ಅಕ್ಟೋಬರ್ 15 ರವರೆಗೆ ದೇವಾಲಯ ಪ್ರವೇಶಿಸಲು ಭಕ್ತರಿಗೆ ಅನುಮತಿ ಇಲ್ಲ.

ಲಾಕ್ ಡೌನ್ ನಂತರ ಆಗಸ್ಟ್ 27ರಿಂದ ದೇವಾಲಯವನ್ನು ಮತ್ತೆ ತೆರೆಯಲಾಗಿದ್ದು, ಒಂದು ಬಾರಿಗೆ 35 ಭಕ್ತರು ದೇವಾಲಯ ಪ್ರವೇಶಿಸಲು ಅನುಮತಿ ನೀಡಲಾಗಿತ್ತು ಮತ್ತು ಒಂದು ದಿನದಲ್ಲಿ ಒಟ್ಟು 665 ಭಕ್ತರು ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿತ್ತು.

ದೇವಾಲಯ ಮತ್ತೆ ತೆರೆದ ನಂತರ ದೇವಸ್ಥಾನದ ಹಲವು ಸಿಬ್ಬಂದಿ ಮತ್ತು ಅರ್ಚಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈಗ ದೇವಸ್ಥಾವನ್ನು ಮತ್ತೆ ಕೆಲವು ದಿನಗಳವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com