ನವದೆಹಲಿ: ಹಲವು ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರಂತೆ ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.
ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಿಡಿಕಾರಿರುವ ರಾಹುಲ್, "ಮುಖ್ಯಮಂತ್ರಿಗಳು ಮತ್ತು ಪೊಲೀಸರು, ಯಾರೂ ಅತ್ಯಾಚಾರಕ್ಕೊಳಗಾಗಿಲ್ಲ ಎಂಬ ಹೇಳಿಕೆ ನೀಡುತ್ತಿದ್ದಾರೆ. ಏಕೆಂದರೆ ಅವರಿಗೆ ಮತ್ತು ಅನೇಕ ಭಾರತೀಯರಿಗೆ ಆ ಯುವತಿ ಯಾರೂ ಆಗಿರಲಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ.
"ನಾಚಿಕೆಗೇಡಿನ ವಿಷಯವೆಂದರೆ ದೇಶದಲ್ಲಿ ಹಲವು ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರೆಂದು ಪರಿಗಣಿಸುವುದಿಲ್ಲ" ಎಂದು ಕಿಡಿಕಾರಿದ್ದಾರೆ.
Advertisement