ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರ ತಂಡವು ತಪಾಸಣೆ ನಡೆಸುತ್ತಿದೆ. ಅವರಲ್ಲಿ ಕೊರೊನಾವೈರಸ್ ಸೋಂಕಿಗೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ ಎಂದು ಸಮಾಜವಾದಿ ಪಕ್ಷದ ಟ್ವಿಟರ್ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.

ಕೊರೊನಾವೈರಸ್ ಸೋಂಕು ತಗುಲಿರುವ ಬಗ್ಗೆ ವರದಿ ಬರುತ್ತಿದ್ದಂತೆ  ಗುರುಗಾವ್ ನಲ್ಲಿರುವ ಮೇದಾಂತ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com