ದೇಶ
ಬಿಹಾರ ವಿಧಾನಸಭೆ ಚುನಾವಣೆ: 'ಮಹಾಘಟ್ಬಂಧನ್' ಪ್ರಣಾಳಿಕೆ ಬಿಡುಗಡೆ
ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಡ ಪಕ್ಷಗಳು ಮಹಾಘಟ್ಬಂಧನ್ ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಣಾಳಿಕೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಡ ಪಕ್ಷಗಳು ಮಹಾಘಟ್ಬಂಧನ್ ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಹಾರ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಣಾಳಿಕೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಬಿಹಾರದಲ್ಲಿ 10 ಲಕ್ಷ ಯುವಜನರಿಗೆ ಉದ್ಯೋಗ ಒದಗಿಸುವ ಭರವಸೆ ಸೇರಿ ಹಲವು ಅಂಶಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಅಂಶವೂ ಇದರಲ್ಲಿ ಪ್ರಮುಖವಾಗಿದೆ.
ಕೃಷಿ ವಿರೋಧಿ ಕಾನೂನುಗಳನ್ನು ರದ್ದುಗೊಳಿಸುವುದು, ಪರೀಕ್ಷಾ ಶುಲ್ಕ ಮನ್ನಾ, ವಿದ್ಯುತ್ ಉತ್ಪಾದನೆ, ವಿದ್ಯುತ್ ಉತ್ಪಾದನೆ ಹೆಚ್ಚಿಸುವುದು ಮುಂತಾದವುಗಳು ಪ್ರಮುಖವಾಗಿವೆ.