ಕೇಂದ್ರಕ್ಕೆ ಸೆಡ್ಡು: ವಿವಾದಿತ ಕೃಷಿ ಮಸೂದೆ ತಡೆಗೆ ಮಸೂದೆ ಜಾರಿಗೆ ಮುಂದಾದ ರಾಜಸ್ತಾನ ಸರ್ಕಾರ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
Published: 21st October 2020 11:37 AM | Last Updated: 21st October 2020 11:37 AM | A+A A-

ಅಶೋಕ್ ಗೆಹ್ಲೋಟ್
ಜೈಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆಯನ್ನು ತಡೆಯಲು ರಾಜಸ್ಥಾನ ಸರ್ಕಾರ ಹೊಸ ಮಸೂದೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ಹೌದು ಈ ಬಗ್ಗೆ ಸ್ವತಃ ಸಿಎಂ ಅಶೋಕ್ ಗೆಹ್ಲೂಟ್ ಅವರು ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ತಡೆಗೆ ತಾವು ಕೂಡ ಮಸೂದೆ ತರುವುದಾಗಿ ಹೇಳಿದ್ದಾರೆ. ಇತ್ತೀಚೆಗಷ್ಟೇ ಇದೇ ವಿಚಾರವಾಗಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಕೃಷಿ ಮಸೂದೆ ತಡೆಗೆ ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮತ್ತು ನಿರ್ಣಯಗಳನ್ನು ಅಂಗೀಕರಿಸಿತ್ತು. ಈ ಬೆಳವಣಿಗೆಯ ನಡುವೆಯೇ ರಾಜಸ್ಥಾನ ಸರ್ಕಾರ ಕೂಡ ಕೃಷಿ ಮಸೂದೆ ಬಿಲ್ ಜಾರಿಗೆ ತರುವುದಾಗಿ ಘೋಷಣೆ ಮಾಡಿದೆ.
ಕೃಷಿ ಕಾನೂನು ತಡೆಗೆ ಮಸೂದೆ ರೂಪಿಸಿ ಎಂದಿದ್ದ ಸೋನಿಯಾ
ಈ ಹಿಂದೆ ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾನೂನುಗಳ ವ್ಯಾಪ್ತಿಯಿಂದ ರಾಜ್ಯಗಳನ್ನು ಹೊರಗಿಡಲು ಸಾಧ್ಯವಾಗುವಂತೆ ರಾಜ್ಯಮಟ್ಟದಲ್ಲಿ ಕಾನೂನು ರಚಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದರು.
आज पंजाब की कांग्रेस सरकार ने इन कानूनों के विरुद्ध बिल पारित किये हैं और राजस्थान भी शीघ्र ऐसा ही करेगा।
— Ashok Gehlot (@ashokgehlot51) October 20, 2020
भारतीय राष्ट्रीय कांग्रेस, श्रीमती सोनिया गांधी जी एवं राहुल गांधी जी के नेतृत्व में हमारे अन्नदाता किसानों के पक्ष में मजबूती से खड़ी है और हमारी पार्टी किसान विरोधी कानून जो एनडीए सरकार ने बनाए हैं, का विरोध करती रहेगी।
— Ashok Gehlot (@ashokgehlot51) October 20, 2020
मंत्री परिषद ने प्रदेश के किसानों के हित में निर्णय किया कि उनके हितों को संरक्षित करने के लिए शीघ्र ही विधानसभा का विशेष सत्र बुलाया जाए। सत्र में भारत सरकार द्वारा लागू किए गए कानूनों के प्रभाव पर विचार-विमर्श किया जाकर राज्य के किसानों के हित में वांछित संशोधन विधेयक लाए जाएं।
— Ashok Gehlot (@ashokgehlot51) October 20, 2020
राज्य मंत्री परिषद की बैठक में केन्द्र सरकार द्वारा किसानों से सम्बन्धित विषयों पर बनाए गए तीन नए कानूनों से प्रदेश के किसानों पर पड़ने वाले प्रभावों पर चर्चा की गई।
— Ashok Gehlot (@ashokgehlot51) October 20, 2020