ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಉಂಟಾಗಿರುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2020ರ ಫೆಬ್ರವರಿಯಿಂದೀಚೆಗೆ ಅಂತಾರಾಷ್ಟ್ರೀಯ ಪ್ರಯಾಣಿಕರ ಆಗಮನ ಮತ್ತು ನಿರ್ಗಮನ ಸಂಚಾರ ನಿರ್ಬಂಧಿಸಲು ಹಂತಹಂತವಾಗಿ ಕ್ರಮಗಳನ್ನು ಕೈಗೊಂಡಿತ್ತು. ಇದೀಗ ಸಡಿಲಿಕೆ ಮಾಡಲಾಗುತ್ತಿದೆ.
ವೀಸಾ ಮತ್ತು ಪ್ರಯಾಣ ನಿರ್ಬಂಧಗಳನ್ನು ಹಂತಹಂತವಾಗಿ ಸಡಿಲಿಸಲು ನಿರ್ಧರಿಸಿದ್ದು, ಆ ಮೂಲಕ ದೇಶಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಭಾರತೀಯರು ಮತ್ತು ವಿದೇಶಿ ಪ್ರಜೆಗಳಿಗೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. ಆದ್ದರಿಂದ ಭಾರತಕ್ಕೆ ಯಾವುದೇ ಉದ್ದೇಶಕ್ಕೆ ಆಗಮಿಸಲು ಬಯಸುವ ಎಲ್ಲ ವಿದೇಶಿ ಪ್ರಜೆಗಳಿಗೆ ಮತ್ತು ಒಸಿಐ ಮತ್ತು ಪಿಐಒ ಕಾರ್ಡ್ ಹೊಂದಿರುವವರಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ.
Advertisement