ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಎಲ್ಲ ಅವಕಾಶಗಳೂ ಬಳಕೆ: ರಾಜನಾಥ್ ಸಿಂಗ್

ದೇಶದ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಯಾವುದೇ ಅವಕಾಶಗಳನ್ನು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್

ನವದೆಹಲಿ: ದೇಶದ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಯಾವುದೇ ಅವಕಾಶಗಳನ್ನು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಬುಧವಾರ ಸೇನಾ ಕಮಾಂಡರ್‌ಗಳ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಚಿವರು, ‘‘ ಸ್ವಾತಂತ್ರ್ಯದ ನಂತರ ಈ ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಹಲವಾರು ಸವಾಲುಗಳನ್ನು ಎದುರಿಸುವಲ್ಲಿ ಭಾರತೀಯ ಸೇನೆಯು ಯಶಸ್ವಿಯಾಗಿದೆ. ಅದು ಭಯೋತ್ಪಾದನೆ, ದಂಗೆ ಅಥವಾ ಯಾವುದೇ ಬಾಹ್ಯ ದಾಳಿಯ ಸಮಸ್ಯೆಯಾಗಿರಲಿ, ಆ ಬೆದರಿಕೆಗಳನ್ನು ತಟಸ್ಥಗೊಳಿಸುವಲ್ಲಿ ಸೈನ್ಯ ಮಹತ್ವದ ಪಾತ್ರ ವಹಿಸಿದೆ. ’’ಎಂದಿದ್ದಾರೆ.

ಉನ್ನತ ಕಮಾಂಡರ್ ಗಳಿಗೆ ಭರವಸೆ ನೀಡಿದ ರಾಜನಾಥ್ ಸಿಂಗ್, ‘’ ರಕ್ಷಣಾ ಸಚಿವಾಲಯವು ಸುಧಾರಣೆಗಳ ಹಾದಿಯಲ್ಲಿ ಸೈನ್ಯವನ್ನು ಮುನ್ನಡೆಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಅನುಕೂಲಗಳನ್ನು ಸಾಧಿಸಲು ಸಹಾಯ ಮಾಡಲು ಬದ್ಧವಾಗಿದೆ. ನಮ್ಮ ಸಶಸ್ತ್ರ ಪಡೆಗಳ ತೋಳುಗಳನ್ನು ಬಲಪಡಿಸಲು ನಾವು ಯಾವುದೇ ಅವಕಾಶ ಬಿಡುವುದಿಲ್ಲ. ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಲಾಗುವುದು’’ ಎಂದರು.

ಚಾಲ್ತಿಯಲ್ಲಿರುವ ಭದ್ರತಾ ಸನ್ನಿವೇಶ ಮತ್ತು ಪಡೆಗಳಿಗೆ ಮುಂದಿನ ಮಾರ್ಗಗಳ ಕುರಿತು ಚರ್ಚಿಸಲು ಭಾರತೀಯ ಸೇನೆಯು 4 ದಿನಗಳ ಕಾಲ ತನ್ನ ಉನ್ನತ ಕಮಾಂಡರ್‌ಗಳ ಸಮಾವೇಶವನ್ನು ನಡೆಸುತ್ತಿದೆ.

ಸಮ್ಮೇಳನದ ಮೂರನೇ ದಿನವಾದ ಮಂಗಳವಾರ ಕಮಾಂಡರ್‌ಗಳನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ 2 + 2 ಭಾರತ-ಯುಎಸ್ ಮಾತುಕತೆ ಕಾರಣ ಅದನ್ನು ಬುಧವಾರಕ್ಕೆ ಮುಂದೂಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com