ಗ್ವಾಲಿಯರ್ ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಗ್ವಿಜಯ್ ಸಿಂಗ್ ಕೇಳಿದ್ದರು: ಎಸ್ ಪಿ ಅಭ್ಯರ್ಥಿ

 ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಗ್ವಾಲಿಯರ್ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ನನ್ನನ್ನು ಕೇಳಿದ್ದರು ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ರೋಷನ್ ಮಿರ್ಜಾ ಹೇಳಿದ್ದಾರೆ.
ದಿಗ್ವಿಜಯ್ ಸಿಂಗ್
ದಿಗ್ವಿಜಯ್ ಸಿಂಗ್

ಗ್ವಾಲಿಯರ್:  ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಗ್ವಾಲಿಯರ್ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ನನ್ನನ್ನು ಕೇಳಿದ್ದರು ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ರೋಷನ್ ಮಿರ್ಜಾ ಹೇಳಿದ್ದಾರೆ.

ನನಗೆ ಕರೆ ಮಾಡಿದ ದಿಗ್ವಿಜಯ್ ಸಿಂಗ್ ಉಪ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆದುಕೊಳ್ಳಿ, ನಿಮಗೆ ಕೌನ್ಸಿಲರ್ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿದ್ದರು, ಆದರೆ ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೆ ಎಂದು ಮಿರ್ಜಾ ಹೇಳಿದ್ದಾರೆ. ಈ ಸಂಬಂಧ ಆಡಿಯೋ ವೈರಲ್ ಆಗಿದೆ.

ನಾಮಪತ್ರ ವಾಪಸ್ ಪಡೆದರೇ 10 ಲಕ್ಷ ರು ಹಣ ನೀಡುವುದಾಗಿ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಅಸ್ಲಮ್ ಎಂಬಾತ ಆಮೀಷ ಒಡ್ಡಿದ್ದ ಎಂದು ಮಿರ್ಜಾ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com